ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತ್ಯು

0


ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸೆ.೩ರಂದು ನಡೆದಿದೆ.
ಕಳೆದ ಮೂರು ತಿಂಗಳ ಹಿಂದೆ ಕಲ್ಲುಗುಂಡಿ ಪೇಟೆಯಲ್ಲಿ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದ ಘಟನೆಗೆ ಸಂಬಂಧಿಸಿ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದ ದೊಡ್ಡಡ್ಕ ನಿವಾಸಿ ಮಹಾಲಿಂಗ ೬೩ ವರ್ಷ ಸೆಪ್ಟಂಬರ್ ೩ ರಂದು ಮೃತಪಟ್ಟರು.

ಕಲ್ಲುಗುಂಡಿ ಪೇಟೆಯಲ್ಲಿ ಅವರು ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಸುಳ್ಯ ಕಡೆಯಿಂದ ಮಡಿಕೇರಿಯತ್ತ ಹೋಗುತ್ತಿದ್ದ ಕಾರು ಅಲ್ಪ ಮಟ್ಟಿಗೆ ಡಿಕ್ಕಿಯಾಗಿ ಅವರು ರಸ್ತೆಗೆ ಬಿದ್ದಿದ್ದರು. ಬಳಿಕ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಬಳಿಕ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಾರದಿದ್ದಾಗ ಅವರನ್ನು ತಮ್ಮ ಮನೆಗೆ ಕರೆ ತರಲಾಗಿತ್ತು.
ಇದೀಗ ಅವರು ಸೆಪ್ಟಂಬರ್ ೩ ರಂದು ಅವರ ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಐವರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.