ಚೊಕ್ಕಾಡಿ:ಬಾಲಗೋಕುಲದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆ- ಬಹುಮಾನ ವಿತರಣೆ

0

ಚೊಕ್ಕಾಡಿ
ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ಗರುಡ ಯುವಕ ಮಂಡಲ ಮತ್ತು ಮಯೂರಿ ಯುವತಿ ಮಂಡಲ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಬಾಲಗೋಕುಲದಲ್ಲಿ ವಿವಿಧ ಸ್ಪರ್ಧೆಗಳನ್ನು ಸೆ.3 ರಂದು ಏರ್ಪಡಿಸಲಾಯಿತು.

ಗರುಡ ಯುವಕ ಮಂಡಲದ ಅಧ್ಯಕ್ಷ ಮನೋಜ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ
ಶ್ರೀದೇವಿ ನಾಗರಾಜ್ ಭಟ್ ಸುಳ್ಯ ಉಪಸ್ಥಿತರಿದ್ದರು. ವೇದಿಕೆಯಲ್ಲಿ
ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಸ್ವಾತಿ ಪದವು, ಶ್ರೀದೇವಿ ಭಜನಾ ಮಂಡಳಿಯ ಶ್ರೀಮತಿ ಶಾರದಾ ಪಾರೆ, ಯುವತಿ ಮಂಡಲದ ಸ್ಥಾಪಕಾಧ್ಯಕ್ಷೆ ಉಷಾಲತಾ ಪಡ್ಪು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸ್ಪರ್ಧೆ ಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಬಾಲಗೋಕುಲದ ಮಾತಾಜಿ ಪಾರ್ವತಿ ನೇಣಾರು ಕಾರ್ಯಕ್ರಮ ನಿರ್ವಹಿಸಿದರು. ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಗರುಡ ಯುವಕ ಮಂಡಲದ ಸದಸ್ಯರು, ಮಯೂರಿ ಯುವತಿ ಮಂಡಲದ ಸದಸ್ಯರು, ಬಾಲಗೋಕುಲದ ಮಾತೆಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.