ಆಮ್ ಆದ್ಮಿ ಪಾರ್ಟಿ: ವೇಣುಗೋಪಾಲ್ ಪುಚ್ಚಪ್ಪಾಡಿ ರಾಜ್ಯ ಜಂಟಿ ಕಾರ್ಯದರ್ಶಿ, ಕಲಂದರ್ ಎಲಿಮಲೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ

0

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಸಮಿತಿ ಜಂಟಿ ಕಾರ್ಯದರ್ಶಿಯಾಗಿ ವೇಣುಗೋಪಾಲ್ ಪುಚ್ಚಪ್ಪಾಡಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಲಂದರ್ ಎಲಿಮಲೆ ಆಯ್ಕೆಯಾಗಿದ್ದಾರೆ. ಆಪ್ ರಾಜ್ಯ ಅಧ್ಯಕ್ಷರಾದ ಚಿತ್ರ ನಟ ಮುಖ್ಯಮಂತ್ರಿ ಚಂದ್ರು ಮತ್ತು ದೆಹಲಿ ಸರ್ಕಾರದ ಮುಖ್ಯ ಸಚೇತಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ನೂತನ ಪದಾಧಿಕಾರಿಗಳ ನಿಯೋಜನೆಯನ್ನು ಪ್ರಕಟಿಸಿದರು.

ವೇಣುಗೋಪಾಲ್ ಪುಚ್ಚಪ್ಪಾಡಿಯವರು ಮೂಲತಃ ಸುಳ್ಯ ತಾಲೂಕಿನ ಗುತ್ತಿಗಾರಿನ ಪುಚ್ಛಪಡಿಯವರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ಸ್ವತಃ ಉದ್ಯಮ ನಡೆಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ದ.ಕ. ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರನ್ನು ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ಕಲಂದರ್ ಎಲಿಮಲೆಯವರನ್ನು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಸಿವಿಲ್ ಇಂಜಿನಿಯರಿಂಗ್ ಉದ್ಯಮಿಯಾಗಿರುವ ಕಲಂದರ್ ರವರು ಸುಳ್ಯ ರೋಟರಾಕ್ಟ್ ಕ್ಲಬ್ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.