ಸುಳ್ಯದ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಮಹಾಸಭೆ

0

ಸುಳ್ಯದ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಮಹಾಸಭೆ

ನೂತನ ಕೋಶಾಧಿಕಾರಿಯಾಗಿ ಪುರುಷೋತ್ತಮ ನಾವೂರು ಆಯ್ಕೆ

ಸುಳ್ಯದ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಇದರ 51ನೇ ವರ್ಷದ ಮಹಾಸಭೆಯು ಸುಳ್ಯ ಶ್ರೀರಾಮ ಪೇಟೆಯಲ್ಲಿರುವ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಸೆ.4ರಂದು ನಡೆಯಿತು.

ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್, ಶಾರದಾಂಬ ಸೇವಾ ಸಮಿತಿ, ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾರಾಯಣ ಕೇಕಡ್ಕ, ಕೋಶಾಧಿಕಾರಿ ಪ್ರದೀಪ್ ಕೆ.ಎನ್, ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಳೆದ ವರ್ಷ ನಡೆದ ಶಾರದಾಂಬ ಉತ್ಸವದ ಲೆಕ್ಕಾಚಾರ ಮಂಡನೆಯನ್ನು ಅಧ್ಯಕ್ಷರಾದ ಚಿದಾನಂದ ವಿದ್ಯಾನಗರ ಸಭೆಯ ಮುಂದಿಟ್ಟರು. ಇದರ ಖರ್ಚು ವೆಚ್ಚದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ನಂತರ 52ನೇ ವರ್ಷದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ಕಾರ್ಯಕ್ರಮ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಈ ಸಲುವಾಗಿ ಗೌರವಾಧ್ಯಕ್ಷ ಗೋಕುಲ್ ದಾಸ್ ಮತ್ತು ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಾರಾಯಣ ಕೇಕಡ್ಕರವರು, ಶಾರದಾಂಬ ಉತ್ಸವ ನಡೆದು ಬಂದ ಬಗ್ಗೆ ಮತ್ತು ಇನ್ನು ಮುಂದೆ ನಡೆಸುವ ಬಗ್ಗೆ ಸವಿವರವಾಗಿ ಸಭೆಯ ಮುಂದಿಟ್ಟರು.
2023- 24ನೇ ಸಾಲಿನ ಕೋಶಾಧಿಕಾರಿಯಾಗಿ ಪುರುಷೋತ್ತಮ ನಾವೂರುರವರು ಆಯ್ಕೆಯಾದರು. ಹಿಂದೆ ಕೋಶಾಧಿಕಾರಿಯಾಗಿದ್ದ ಪ್ರದೀಪ್ ಕೆ.ಎನ್ ಅವರು ತನ್ನ ವೈಯಕ್ತಿಕ ಸಮಸ್ಯೆಯಿಂದ ಕೋಶಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು ಎಲ್ಲರನ್ನು ಸ್ವಾಗತಿಸಿ, ವಂದಿಸಿದರು.