ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾಜ ಮುಖಿಯಾಗಿ ಬದುಕಬೇಕು. ಡಾl ರವಿ ಕಕ್ಕೆಪದವು

0

ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾಜ ಮುಖಿಯಾಗಿ ಬದುಕಬೇಕು ಎಂದು ಉದ್ಯಮಿ, ಸಾಮಾಜಿಕ ಕಾರ್ಯಕರ್ತರಾದ ಶ್ರೀ ರವಿ ಕಕ್ಕೆಪದವು ನುಡಿದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ , ಆಂತರಿಕ ಗುಣಮಟ್ಟ ಭರವಸಾ ಕೋಶ , ಸಮಾಜಶಾಸ್ತ್ರ ವಿಭಾಗ ವತಿಯಿಂದ ಸೆ. 5 ರಂದು ಸಾಮಾಜಿಕ ಉದ್ಯಮಶೀಲತೆ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅತಿಥಿ ಸ್ಥಾನದಿಂದ ಮಾತನಾಡುತಿದ್ದರು.

ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲ ಕರ್ತವ್ಯದಲ್ಲಿದ್ದ ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಕೆ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ , ಶ್ರೀಮತಿ ಆರತಿ ಕೆ, ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಾವನ ಕಾರ್ಯಕ್ರಮ ನಿರೂಪಿಸಿದರು.

ಕಿರಣ್ ಸ್ವಾಗತಿಸಿ, ನಾಗೇಶ್ ಅತಿಥಿಗಳ ಪರಿಚಯವನ್ನು ಮಾಡಿದರು. ಕಿಶೋರ್ ಧನ್ಯವಾದ ಸಮರ್ಪಿಸಿದರು. ತೃತೀಯ ಪದವಿಯ ವಿದ್ಯಾರ್ಥಿ ಕಾರ್ಯಕ್ರಮ ಸಂಯೋಜಕಿ ನಮಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.