ಮೇನಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ಬಿಗು ಪೋಲೀಸ್ ಬಂದೋಬಸ್ತ್

0

ತಾಲೂಕು ಮಟ್ಟದ ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟ

ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಮೇನಾಲದಲ್ಲಿ ನಡೆಯಿತು.

ಶಾಸಕಿ‌ ಭಾಗೀರಥಿ ‌ಮುರುಳ್ಯ ದೀಪ ಬೆಳಗಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಮೇನಾಲ ಕಾಳಿಕಾ ದುರ್ಗಾಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿ ಪದ್ಮನಾಭ ಸ್ವಾಮಿ, ಮೇನಾಲ ಭಜನಾ ಮಂದಿರದ ಅಧ್ಯಕ್ಷ ಕಮಲಾಕ್ಷ ರೈ ಮೇನಾಲ,

ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ರಾಘವ ಗೌಡ ಅತ್ಯಾಡಿ, ಸುಕುಮಾರ್ ಕಲ್ಲಗುಡ್ಡೆ, ಕಿರಣ್ ರೈ ಮೇನಾಲ, ಮಹೇಶ್ ರೈ ಮೇನಾಲ ಮೊದಲಾದವರಿದ್ದರು.

ತಾಲೂಕು ಮಟ್ಟದ ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟ ಆರಂಭಗೊಂಡಿತು.

ಅಲ್ಲದೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

ಬಿಗು ಪೋಲೀಸ್ ಬಂದೋಬಸ್ತ್ : ಅಜ್ಜಾವರ ಗ್ರಾಮದ ಮೇನಾಲದಲ್ಲಿ ಭಜನಾ ಮಂದಿರದ ಪಕ್ಕದ ಖಾಲಿ ಜಾಗದಲ್ಲಿ ಅಷ್ಟಮಿ ಆಚರಣೆ ನಡೆಯುತ್ತಿದ್ದು ಬಿಗು ಪೋಲೀಸ್ ಬಂದೋಬಸ್ತ್ ವಹಿಸಲಾಗಿದೆ. ಸುಳ್ಯ‌ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರ ನೇತ್ರತ್ವದಲ್ಲಿ ಸುಳ್ಯ ವೃತ್ತದ ಪೋಲೀಸರು ಸ್ಥಳದಲ್ಲಿದ್ದಾರೆ.