ಸುಬ್ರಹ್ಮಣ್ಯ: ಘನ ತ್ಯಾಜ್ಯ ವಿಲೇವಾರಿ ಸಂಜೀವಿನಿ ಒಕ್ಕೂಟಕ್ಕೆ ಹಸ್ತಾಂತರ ಕಾರ್ಯಕ್ರಮ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಯನ್ನು ಪಂಚಾಯತ್ ನ ಆಶ್ರಯದಲ್ಲಿ ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ, ಇವರೊಂದಿಗೆ ವಿಲೇವಾರಿ ಒಡಂಬಡಿಕೆಯನ್ನು ಸೆ.4 ರಂದು ಮಾಡಿಕೊಳ್ಳ ಲಾಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ತಾ.ಪಂ ಸಹಾಯಕ ನಿರ್ದೇಶಕಿ ಶೈಲಜಾ ಭಟ್ , ದ.ಕ ಜಿಲ್ಲಾ ಪಂಚಾಯತ್ ಸಂಯೋಜಕ ಡೊಂ ಬಯ್ಯ, ಪುತ್ತೂರು ತಾ.ಪಂ ಕಾರ್ಯಕ್ರಮ ವ್ಯವಸ್ಥಾಪಕ ಜಗತ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಆಕಾಶ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಲಿತಾ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಸುಜಾತಾ ಜಿ, ಪಂಚಾಯತ್ ಸರ್ವ ಸದಸ್ಯರು,

ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ, ಒಕ್ಕೂಟ ದ ಕಾರ್ಯದರ್ಶಿ ಮೀನಾಕ್ಷಿ ಪಿ, ಒಕ್ಕೂಟ ದ ಪದಾಧಿಕಾರಿಗಳು mbk, lcrp, ಗಳು, ಕೃಷಿ ಸಖಿ, ಪಶುಸಖಿ, ಬಿಸಿ ಸಖಿ, ಕೃಷಿ ಉದ್ಯೋಗ ಸಖಿ, ಪಂಚಾಯತ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಆಕಾಶ್ ಎಲ್ಲರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಮೋನಪ್ಪ ಡಿ ವಂದನಾರ್ಪಣೆ ಮಾಡಿದರು.