ಅಯ್ಯನಕಟ್ಟೆಯಲ್ಲಿ ರಾಷ್ಟೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಅಭಿಯಾನ ಮಾಸಾಚರಣೆ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಗ್ರಾ. ಪಂ. ಕಳಂಜ, ಶ್ರೀ ರಕ್ಷ ಗೊಂಚಲು ಸಮಿತಿ ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಅಯ್ಯನಕಟ್ಟೆ ಪಂ. ದೀನದಯಾಲ್ ಸಭಾಭವನದಲ್ಲಿ ಸೆ.06ರಂದು ನಡೆಯಿತು.

ಕಳಂಜ ಗ್ರಾ. ಪಂ. ಅಧ್ಯಕ್ಷ ಬಾಲಕೃಷ್ಣ ಬೇರಿಕೆ ಕಾರ್ಯಕ್ರಮವನ್ನು ಉಧ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಸೊಸೈಟಿಯ ಸದಸ್ಯೆ ಶ್ರೀಮತಿ ಹರಿಣಾಕ್ಷಿ , ಕಳಂಜ ಗ್ರಾ.ಪಂ. ಉಪಾದ್ಯಕ್ಷೆ ಶ್ರೀಮತಿ ಪ್ರೇಮಲತ, ಶ್ರೀರಕ್ಷಾ ಗೊಂಚಲಿನ ಕಾರ್ಯದರ್ಶಿ ಯಮುನ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ಮೇಲ್ವಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಕಾರ್ಯಕ್ರಮದ ಬಗ್ಗೆ ಪೌಷ್ಟಿಕತೆಯ ಬಗ್ಗೆ ಮಾಹಿತಿ ನೀಡಿದರು. ಶ್ರೀರಕ್ಷಾ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಪೋಷಕರು ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳಿಗೆ ಪೌಷ್ಟಿಕ ತಿನಿಸುಗಳ ಸ್ಪರ್ಧೆ ನಡೆಸಿ ವಿಜೇತರಿಗೆ ಗೊಂಚಲಿನ ವತಿಯಿಂದ ಬಹುಮಾನ ವಿತರಿಸಿದರು. ಅಯ್ಯನಕಟ್ಟೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದೀಪ್ತಿ ಸ್ವಾಗತಿಸಿ ವಂದಿಸಿದರು. ತಂಟೆಪ್ಪಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಯಶೋದ ಕಾರ್ಯಕ್ರಮ ನಿರೂಪಿಸಿದರು. ವಿಷ್ಣುನಗರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರಂಜಿತ ಮತ್ತು ಕೋಟೆ ಮುಂಡುಗಾರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯ ಸಹಕರಿಸಿದರು. ಕಾರ್ಯಕ್ರಮದಲ್ಲಿ ಪೋಷಕರು, ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.