ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆಯ ಕಮಿಷನರ್ ಸಿ .ಎಚ್. ಬಸವರಾಜೇಂದ್ರ ಕುಕ್ಕೆ ಸುಬ್ರಹ್ಮಣ್ಯ ಭೇಟಿ

0

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಕಮಿಷನರ್ ಸಿ .ಎಚ್. ಬಸವರಾಜೇಂದ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೆ.6 ರಂದು ಭೇಟಿ ನೀಡಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ರಾಮ್ ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾl ನಿಂಗಯ್ಯ, ಸದಸ್ಯರುಗಳಾದ ಶೋಭ ಗಿರಿಧರ್, ವನಜ ವಿ ಭಟ್, ಪ್ರಸನ್ನ ದರ್ಬೆ, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್, ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮತ್ತು ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.

ಸುಬ್ರಹ್ಮಣ್ಯದಲ್ಲಿ ತಂಗಿದ್ದ ಅವರು
ಸೆ.7 ರ ಬೆಳಗ್ಗೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನೆರವೇರಿಸಿ ಅಲ್ಲಿಂದ ಹೊಸಳ್ಳಿಗಮ್ಮ ದರ್ಶನವನ್ನು ಪಡೆದರು.