ಬೆಳೆ ವಿಮೆ ಮಾಡಿಸಿರುವ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಿಕೊಳ್ಳಲು ಸೂಚನೆ

0

ಸೆ.15 ಕೊನೆಯ ದಿನ : ತೋಟಗಾರಿಕಾ ಇಲಾಖೆ ಮಾಹಿತಿ

೨೦೨೩-೨೪ ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ನೋಂದಾವಣೆಗೊಳ್ಳಲು ಬೆಳೆ ವಿಮೆ ಮಾಡಿಸಲಾಗುವ ಬೆಳೆಯು ರೈತರ ಸರ್ವೇ ನಂಬರ್ ನಲ್ಲಿ ಬೆಳೆ ಸಮೀಕ್ಷೆಯಡಿ ನಮೂದಾಗಿರುವುದು ಕಡ್ಡಾಯಗೊಳಿಸಲಾಗಿರುತ್ತದೆ. ಬೆಳೆ ಸಮೀಕ್ಷೆಯಡಿ ವಿಮೆ ಮಾಡಿಸಲಾಗುವ ಬೆಳೆಯು ನಮೂದಾಗದಿದ್ದ ಪಕ್ಷದಲ್ಲಿ, ಅಂತಹ ರೈತರ ನೋಂದಾವಣೆಯು ತಿರಸ್ಕೃತವಾಗುತ್ತದೆ.
ಆದ್ದರಿಂದ ರೈತರು ತಾವೇ ಖುದ್ದಾಗಿ ಅಥವಾ ಬೆಳೆ ಸಮೀಕ್ಷೆ ಕೈಗೊಳ್ಳಲು ತಮ್ಮ ಗ್ರಾಮಕ್ಕೆ ನಿಯೋಜಿತರಾಗಿರುವ ಖಾಸಗಿ ನಿವಾಸಿಗಳ ಮುಖಾಂತರ ಸೆಪ್ಟಂಬರ್ ೧೫ ನೇ ತಾರೀಖಿನೊಳಗೆ ಕಡ್ಡಾಯವಾಗಿ ಬೆಳೆ ಸಮೀಕ್ಷೆ ಕೈಗೊಂಡ್ಡು ವಿಮೆ ಮಾಡಿಸಿರುವ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಿಕೊಳ್ಳಲು ತಿಳಿಸಿದೆ.