ಶೇಣಿ: 20ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀ ಸತ್ಯನಾರಾಯಣ ಪೂಜೆ

0

ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿ ಶೇಣಿ ಇದರ ಆಶ್ರಯದಲ್ಲಿ 20ನೇ‌ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಸತ್ಯನಾರಾಯಣ ಪೂಜೆ
ಸೆ. 10ರಂದು ಶೇಣಿ ಶಾಲಾ ವಠಾರದಲ್ಲಿ ನಡೆಯುತ್ತಿದೆ.

ತಿರುಮಲೇಶ್ವರ ಕೋಟೆಯವರ ನೇತೃತ್ವದಲ್ಲಿ ನಡೆಯಯತ್ತಿರುವ ಸತ್ಯನಾರಾಯಣ ಪೂಜೆಗೆ ಪ್ರಾರ್ಥನೆ ಬಳಿಕ ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ದೀಕ್ಷಿತ್ ಪೋನಡ್ಕ ವಹಿಸಿದ್ದರು. ಸಮಿತಿಯ ಧಾರ್ಮಿಕ ಸಲಹೆಗಾರರಾದ ಸಿದ್ಧಿವಿನಾಯಕ ಭಟ್ ಚೂಂತಾರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ನಿವೃತ್ತ ಶಿಕ್ಷಕ ಮೇದಪ್ಪ ಗೌಡ ತಂಟೆಪ್ಪಾಡಿ, ಶೇಣಿ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ಮಾಡಬಾಗಿಲು ಮತ್ತು ಸಮಿತಿಯ ಸ್ಥಾಪಕಾಧ್ಯಕ್ಷ ಧರ್ಮಪಾಲ ಪೂಜಾರಿ ಶೇಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿಯ ಮಾಜಿ ಅಧ್ಯಕ್ಷ ವಿಶ್ವನಾಥ ಮೋಟುಕಾನ ಸ್ವಾಗತಿಸಿ, ಮಾಜಿ ಕಾರ್ಯದರ್ಶಿ ವಿವೇಕ್ ರೈ ಶೇಣಿ ವಂದಿಸಿದರು. ಸಮಿತಿಯ ಸದಸ್ಯ ಸೃಜನ್ ಶೇಣಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ.

ಮಧ್ಯಾಹ್ನ ಶ್ರೀ ಸತ್ಯನಾರಾಯಣ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಸಮಾರೋಪ‌ ಸಮಾರೋಪ ಸಮಾರಂಭ, ಬಹುಮಾನ ವಿತರಣೆ ನಡೆಯಲಿದೆ ಎಂದು ಶೇಣಿ ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿ ಅಧ್ಯಕ್ಷ ದೀಕ್ಷಿತ್ ಪೋನಡ್ಕ ತಿಳಿಸಿದ್ದಾರೆ. ಸಮಿತಿಯ ಸ್ಥಾಪಕಾಧ್ಯಕ್ಷರಾಗಿ ಧರ್ಮಪಾಲ ಪೂಜಾರಿ ಶೇಣಿ, ಕಾರ್ಯದರ್ಶಿಯಾಗಿ ಅಶೋಕ ಪೂಜಾರಿ ಶೇಣಿ, ಅಶ್ವಿನ್ ರೈ ಶೇಣಿ ಸೇವೆ ಸಲ್ಲಿಸುತ್ತಿದ್ದಾರೆ.