ಗೂನಡ್ಕ ಶ್ರೀಕೃಷ್ಣ ಬಳಗದ ವತಿಯಿಂದ 26ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಉದ್ಘಾಟನೆ

0

ಸಂಪಾಜೆ ಗ್ರಾಮದ ಗೂನಡ್ಕ ಶ್ರೀಕೃಷ್ಣ ಬಳಗದ ವತಿಯಿಂದ 26ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಮತ್ತು ಯೋಧ ನಮನ ಕಾರ್ಯಕ್ರಮವು ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸೆ.10ರಂದು ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ದಾಮೋದರ ಮಾಸ್ತರ್ ಅವರು ಉದ್ಘಾಟಿಸಿದರು. ಶ್ರೀಕೃಷ್ಣ ಬಳಗದ ಸ್ಥಾಪಕಾಧ್ಯಕ್ಷ ಗೋವರ್ಧನ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಪುಂಡರೀಕ ಪಿ.,

ನಿವೃತ್ತ ಮುಖ್ಯ ಶಿಕ್ಷಕ ಚಿದಾನಂದ ಮಾಸ್ತರ್ ಯು.ಎಸ್, ಶಾರದಾ ಅನುದಾನಿತ ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಆಶಾ ವಿನಯಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಪ್ರೌಢಶಾಲಾ ಮಕ್ಕಳಿಗೆ, ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗುತ್ತಿವೆ.