ಹಾಲೆ ಮಜಲು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ನಾಲ್ಕೂರು ಗ್ರಾಮದ ಆದರ್ಶ ಯೂಥ್ ಕ್ಲಬ್ ರಿ. ಹಾಲೆಮಜಲು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು ಹಾಲೆಮಜಲಿನಲ್ಲಿರುವ ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು.

ಸಭಾಧ್ಯಕ್ಷತೆಯನ್ನು ಕ್ಲಬ್ ನ ಗೌರವಾಧ್ಯಕ್ಷ ದಿನೇಶ್ ಹಾಲೆಮಜಲು ವಹಿಸಿದರು. ವೇದಿಕೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯಿತಿನ ನಾಲ್ಕು ಎರಡನೇ ವಾರ್ಡಿನ ಸದಸ್ಯರಾದ ಶ್ರೀಮತಿ ಅನಿತಾ ಮೆಚ್ಚಿನಡ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕ್ಲಬ್ ನ ಅಧ್ಯಕ್ಷ ಸತೀಶ್ ಬಂಬುಳಿ ಸ್ವಾಗತಿಸಿ, ಕಾರ್ಯದರ್ಶಿ ದೀಪಕ್ ಕುಂಬಡ್ಕ. ಧನ್ಯವಾದ ಮಾಡಿದರು.

ನಂತರ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ದುರ್ಗದಾಸ್ ಕಡ್ಲರು. ಕಾರ್ಯಕ್ರಮ ನಿರೂಪಿಸಿದರು.

ವರದಿ ಡಿ ಎಚ್