ಸೆ. 15: ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

0

ಮೂವರಿಗೆ ಸನ್ಮಾನ

ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಅಲೆಕ್ಕಾಡಿ ಇದರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆಪ್ಟೆಂಬರ್ 15 ರಂದು ಕೇರ್ಪಡ ಮಹಿಷ ಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಊರುಸಾಗುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಹಾಗೂ ಮಂಗಳೂರು ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.