ರೆಂಜಾಳ ದೇವಾಲಯದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟನೆ

0

ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ‌ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ಇಂದು ಬೆಳಿಗ್ಗೆ ಉದ್ಘಾಟನೆಗೊಂಡಿತು.

ಸಭಾ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ಶ್ರೀ ಶಾಸ್ತಾವು ಯುವಕ ಮಂಡಲದ ಅಧ್ಯಕ್ಷರಾದ ಶಶಿಕಾಂತ ಗುಳಿಗಮೂಲೆ ವಹಿಸಿದ್ದರು. ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಬಳ್ಳಕ್ಕಾನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ದಯಾನಂದ ಕೊರತ್ತೋಡಿ,

ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಉಪಾಧ್ಯಕ್ಷ ವಿಜಯಕುಮಾರ್ ಉಬರಡ್ಕ, ಮರ್ಕಂಜ ಗ್ರಾ.ಪಂ. ಸದಸ್ಯೆ ರಮತಾ ಕುದ್ಕುಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಯುವಕ ಮಂಡಲದ ಕಾರ್ಯಚಟುವಟಿಕೆಗಳಿಗೆ ಮುಚ್ವುಗೆ ಸೂಚಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ನಿವೃತ್ತ ಯೋಧ ಜಯರಾಮ ಹೊಸೊಳಿಕೆ, ಮರ್ಕಂಜ ಯುವಕ ಮಂಡಲ ಅಧ್ಯಕ್ಷ ನವೀನ್ ದೊಡ್ಡಿಹಿತ್ಲು, ವಿಷ್ಣು ಯುವಕ ಮಂಡಲದ ಅಧ್ಯಕ್ಷ ಬಾಲಕೃಷ್ಣ ಕಂಜಿಪಿಲಿ ವೇದಿಕೆಯಲ್ಲಿ ಮುಖ್ಯ‌ಅತಿಥಿಗಳಾಗಿ ಉಪಸ್ಥಿತರಿದ್ದರು.

ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಶಿವರಂಜನ್ ರಾವ್ ಸ್ವಾಗತಿಸಿ, ಸದಸ್ಯ ಐತ್ತ ರೆಂಜಾಳ ವಂದಿಸಿದರು. ರಮೇಶ್ ಅಗಲ್ತಡಿ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಾರ್ಯಕ್ರಮದ ಪ್ರಯುಕ್ತ ಅಟ್ಟಿ‌ಮಡಿಕೆ, ಅಡ್ಡ ಕಂಬ, ಕ್ರೀಡಾ ಸ್ಪರ್ಧೆಗಳು ಆರಂಭವಾಯಿತು. ಸಂಜೆ ಸಮಾರೋಪ ಸಮಾರಂಭ ಮತ್ತು‌ ಬಹುಮಾನ‌ ವಿತರಣೆ ನಡೆಯಲಿದೆ.‌