ಸೆ. 12: ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ನೇತೃತ್ವದಲ್ಲಿ ನಿಂತಿಕಲ್ಲು ಕೆ.ಎಸ್. ಗೌಡ ಸಮೂಹ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ

0

ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಕೆ.ಎಸ್. ಗೌಡ ಸಮೂಹ ವಿದ್ಯಾ ಸಂಸ್ಥೆಗಳು ನಿಂತಿಕಲ್ಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ಸಂಚಾರಿ ನೇತ್ರ ಘಟಕ ಹಾಗೂ ಕೆ.ಎಂ.ಸಿ.ಯ ಪ್ರಸಿದ್ಧ ನೇತ್ರ ತಜ್ಞರ ಭಾಗವಹಿಸುವಿಕೆಯಲ್ಲಿ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಸೆ. 12ರಂದು ಮಂಗಳವಾರ ನಿಂತಿಕಲ್ಲಿನ ಕೆ.ಎಸ್. ಗೌಡ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30 ರ ತನಕ ನಡೆಯಲಿದೆ. ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇವರು ಉಚಿತ ಕನ್ನಡಕ ವಿತರಣೆ ಮಾಡಲಿದ್ದಾರೆ. ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಚಿಕಿತ್ಸೆ ಮತ್ತು ಸಲಹೆ, ಉಚಿತ ಕಣ್ಣಿನ ಪೊರೆ ಅಪರೇಶನ್, ಉಚಿತ ಪ್ರಯಾಣ, ವಸತಿ, ಊಟ ಮತ್ತು ಉಪಾಪಾರ, ಉಚಿತ ಕನ್ನಡಕ ನಿಡಲಾಗುವುದೆಂದು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಅಧ್ಯಕ್ಷ ವಿಠಲ್ ಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.