ಅಡ್ತಲೆ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಸ್ಪಂದನ ಗೆಳೆಯರ ಬಳಗ (ರಿ) ಅಡ್ತಲೆ ಇದರ ವತಿಯಿಂದ ಐದನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆ. 10 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಇದರ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಡ್ತಲೆ-ಬೆದ್ರುಪಣೆ ಮಲೆ ದೈವಗಳ ಆಡಳಿತ ಸಮಿತಿಯ ಅಧ್ಯಕ್ಷ ಗಣೇಶ್ ಮಾಸ್ತರ್ ಅಡ್ತಲೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ತೇಜಸ್ವಿ ಕಡಪಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಅಡ್ತಲೆ, ಶಾಲಾ ಮುಖ್ಯ ಶಿಕ್ಷಕ ಮಾಧವ ಮಾಸ್ತರ್, ಸ.ಮಾ.ಹಿ.ಪ್ರಾ.ಶಾಲೆ ಅರಂತೋಡು ಇದರ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿ ಅಡ್ತಲೆ ಹಾಗೂ ಗೌರವ ಸಲಹೆಗಾರ ಭವಾನಿಶಂಕರ ಅಡ್ತಲೆ ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಬಳಗದ ಸದಸ್ಯ ಜಗದೀಶ್ ಕಾಯರ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಶ್ರೀ ಕಿಶೋರ್ ಅಡ್ಕ ವಂದಿಸಿದರು. ರಂಜಿತ್ ಅಡ್ತಲೆ ನಿರೂಪಿಸಿದರು. ನಂತರ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

ಸಮಾರೋಪ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷ ವಿನಯ್ ಬೆದ್ರುಪಣೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ , ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಜಯಾ ಲೋಹಿತ್ ಮೇಲಡ್ತಲೆ, ಗೌರವ ಸಲಹೆಗಾರ ಭವಾನಿಶಂಕರ ಅಡ್ತಲೆ , ನಾಗರಿಕ ಹಿತರಕ್ಷಣ ವೇದಿಕೆಯ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ, ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಪಿಂಡಿಮನೆ ಭಾಗವಹಿಸಿ ಶುಭಾಶಂಸನೆಗೈದರು.

ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಹಾಗೂ ಗ್ರಾಮದ ಭ್ರಷ್ಟ ಆಡಳಿತಾಧಿಕಾರಿಯನ್ನು ಲೋಕಾಯುಕ್ತ ಇಲಾಖೆಯ ಸುಪರ್ದಿಗೆ ಒಳಪಡಿಸಿದ ಹರಿಪ್ರಸಾದ್ ಅಡ್ತಲೆ ಇವರುಗಳನ್ನು ಸ್ಪಂದನ ಗೆಳೆಯರ ಬಳಗದ ವತಿಯಿಂದ ಸಾರ್ವಜನಿಕರ ಪರವಾಗಿ ಸನ್ಮಾನಿಸಲಾಯಿತು. ನಂತರ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಬಳಗದ ಉಪಾಧ್ಯಕ್ಷ ಲೋಹಿತ್ ಮೇಲಡ್ತಲೆ ಸ್ವಾಗತಿಸಿ, ಸದಸ್ಯ ರಂಜಿತ್ ಅಡ್ತಲೆ ನಿರೂಪಿಸಿ, ನಿರ್ದೇಶ ಪ್ರವೀಣ್ ಪಾನತ್ತಿಲ ವಂದಿಸಿದರು. ಸ್ಪಂದನ ಗೆಳೆಯರ ಬಳಗದ ಪದಾಧಿಕಾರಿಗಳು, ಸದಸ್ಯರು,ಗೌರವ ಸಲಹೆಗಾರರು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಹಕರಿಸಿದರು.