ಕೂತ್ಕುಂಜ: ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

0

ಕೂತ್ಕುಂಜ ಶಿವಾಜಿ ಯುವಕ ಮಂಡಲ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಹಾಗೂ ಮೊಸರು ಕುಡಿಕೆ ಮತ್ತು ಸ್ಪರ್ಧಾ ಕಾರ್ಯಕ್ರಮಗಳು ಕೂತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಸೆ.10ರಂದು ನಡೆಯಿತು. ಕಾರ್ಯಕ್ರಮವನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಉದ್ಘಾಟಿಸಿ ಶುಭಹಾರೈಸಿದರು.


ಯುವಕ ಮಂಡಲದ ಅಧ್ಯಕ್ಷ ದೇವಿಪ್ರಸಾದ್ ಕುಳ್ಳಾಜೆ ಸಭಾಧ್ಯಕ್ಷತೆ ವಹಿಸಿದ್ದರು. ತುಂಬೆ ಬಿ.ಎ. ಐ.ಟಿ.ಐ ಪ್ರಾಂಶುಪಾಲ ನವೀನ್ ಕುಮಾರ್ ಕೆ.ಎಸ್ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಪಂಜ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸವಿತಾರಾ ಮುಡೂರು, ಯುವಕ ಮಂಡಲದ ಸ್ಥಾಪಕ ಕಾರ್ಯದರ್ಶಿ ಪರಮೇಶ್ವರ ಭಟ್ ಕೂತ್ಕುಂಜ ಹಾಗೂ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಯೋಗೀಶ್ ಚಿದ್ಗಲ್, ಕಾರ್ಯದರ್ಶಿ ಪ್ರಜ್ವಲ್ ಚಿದ್ಗಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಯುವಕ ಮಂಡಲದ ವತಿಯಿಂದ ಕೂತ್ಕುಂಜ ಶಾಲೆಗೆ ಕ್ರೀಡಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಸುಶ್ಮಿತಾ ಆದಿತ್ಯ ಚಿದ್ಗಲ್ ಪ್ರಾರ್ಥಿಸಿದರು. ಕಾರ್ಯಕ್ರಮ ನಿರ್ದೇಶಕ ಲಿಖಿತ್ ಅಜ್ಜಿಹಿತ್ಲು ಸ್ವಾಗತಿಸಿದರು. ಷಣ್ಮುಖ ಹೊಸೋಕ್ಲು ನಿರೂಪಿಸಿದರು.ಪ್ರಜ್ವಲ್ ಚಿದ್ಗಲ್ ವಂದಿಸಿದರು. ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು.

ಸಮಾರೋಪ ಸಮಾರಂಭ :


ಸಂಜೆ ಸಮಾರೋಪ ಬಹುಮಾನ ವಿತರಣೆ ಸಮಾರಂಭದಲ್ಲಿ ಯುವಕ ಮಂಡಲದ ಅಧ್ಯಕ್ಷ ದೇವಿ ಪ್ರಸಾದ್ ಕುಳ್ಳಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪ್ರಗತಿ ಪರಕೃಷಿಕ ದೇವದಾಸ್ ಖಂಡಿಗೆ-ಕಕ್ಯಾನ,
ಗೋಪಾಲ ಗೌಡ ಚಿದ್ಗಲ್ ಮುರಕಲ್ಲು ಹಾಗೂ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಯೋಗೀಶ್ ಚಿದ್ಗಲ್, ನಿಕಟಪೂರ್ವಾಧ್ಯಕ್ಷ ಉಜ್ವಲ್ ಚಿದ್ಗಲ್ , ಕಾರ್ಯದರ್ಶಿ ಪ್ರಜ್ವಲ್ ಚಿದ್ಗಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಕಾರ್ಯಕ್ರಮದಲ್ಲಿ ಜಯರಾಮ ಕಲ್ಲಾಜೆ ಸ್ವಾಗತಿಸಿದರು.ಷಣ್ಮುಖ ಹೊಸೋಕ್ಲು ನಿರೂಪಿಸಿದರು. ಭವನ್ ಚಿದ್ಗಲ್ ವಂದಿಸಿದರು.