ಗೂನಡ್ಕ : ಗೋ ಕಳ್ಳತನವಾದ ಮನೆಗೆ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡರ ಭೇಟಿ

0

ಸೆ.12ರಂದು ತಡರಾತ್ರಿ ಗೋ ಕಳ್ಳತನವಾದ ಗೂನಡ್ಕದ ವರದರಾಜ್ ಸಂಕೇಶ್ ರವರ ಮನೆಗೆ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ತಾಲೂಕು ಸಂಚಾಲಕರಾದ ಹರಿಪ್ರಸಾದ್ ಎಲಿಮಲೆ, ಮೊಸರು ಕುಡಿಕೆ ಉತ್ಸವ ಸಮಿತಿಯ ಉಪಾಧ್ಯಕ್ಷ ರಜತ್ ಅಡ್ಕಾರ್, ವಿಶ್ವ ಹಿಂದೂ ಪರಿಷತ್ ತಾಲೂಕು ಸೇವಾ ಪ್ರಮುಖ್ ಭಾನುಪ್ರಕಾಶ್ ಪೆಲತ್ತಡ್ಕ, ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದು ಮನೆಯವರಿಗೆ ಧೈರ್ಯ ತುಂಬಿದರು. ಹಾಗೂ ಈ ಬಗ್ಗೆ ಪೋಲಿಸ್ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆದಷ್ಟು ಶೀಘ್ರದಲ್ಲಿ ಕಳವಾದ ದನಗಳು ಹಾಗೂ ಗೋಕಳ್ಳರನ್ನು ಪತ್ತೆ ಹಚ್ಚುವಂತೆ ಆಗ್ರಹಿಸಲಾಗುವುದು ಎಂದು ತಿಳಿಸಿದರು.