ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

0

*ರೂ.880 ಕೋಟಿ ವ್ಯವಹಾರ, 1,51,ಕೋಟಿಗೂ ಮಿಕ್ಕಿ ನಿವ್ವಳ ಲಾಭ, ಸದಸ್ಯರಿಗೆ ಶೇ.20 ಡಿವಿಡೆಂಡ್*

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮರವರ ಅಧ್ಯಕ್ಷತೆಯಲ್ಲಿ ಸೆ.16 ರಂದು ಕೊಡಿಯಾಲ ಬೈಲ್ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಟಿ.ವಿಶ್ವನಾಥ ವರದಿ ಮಂಡಿಸಿದರು.

ಸಂಘದ ಅಧ್ಯಕ್ಷ ಪಿ.ಸಿ.ಜಯರಾಮರವರು ಮಾತನಾಡಿ ಸಂಘವು ಆರಂಭದಿಂದಲೂ ಲಾಭದಲ್ಲಿ ನಡೆಯುತ್ತಿದ್ದು ವರದಿ ವರ್ಷದಲ್ಲಿ ರೂ.880 ಕೋಟಿ ವ್ಯವಹಾರ ನಡೆಸಿ, 1,51,88,550.61 ನಿವ್ವಳ ಲಾಭ ಗಳಿಸಿರುತ್ತದೆ.ಸಂಘದ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗುವುದು ಎಂದು ಹೇಳಿ ಎಲ್ಲರ ಸಹಕಾರ ಕೋರಿದರು.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರುಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

*ಸನ್ಮಾನ*
ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿರುವ ಸಂಘದ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ,ಧಾರ್ಮಿಕ,ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ನಿತ್ಯಾನಂದ ಮುಂಡೋಡಿ ದಂಪತಿಗೆ ಶಾಲು ಹೊದಿಸಿ,ಫಲ,ಪುಷ್ಪ,ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ದಿನೇಶ್ ಮಡಪ್ಪಾಡಿ ಸನ್ಮಾನ ಪತ್ರ ವಾಚಿಸಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ನಿರ್ದೇಶಕರಾದ ಸದಾನಂದ ಜಾಕೆ, ನಿತ್ಯಾನಂದ ಮುಂಡೋಡಿ, ಎ.ವಿ.ತೀರ್ಥರಾಮ, ಚಂದ್ರ ಕೋಲ್ಚಾರ್, ಕೆ.ಸಿ.ನಾರಾಯಣ ಗೌಡ, ಕೆ.ಸಿ.ಸದಾನಂದ, ಪಿ.ಎಸ್.ಗಂಗಾಧರ, ದಿನೇಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಜಯಲಲಿತ ಕೆ.ಎಸ್., ನಳಿನಿ ಸೂರಯ್ಯ, ಲತಾ ಎಸ್.ಮಾವಜಿ, ಹೇಮಚಂದ್ರ ಐ.ಕೆ,
ನವೀನ್ ಕುಮಾರ್ ಜೆ.ವಿ , ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ್ ವೇದಿಕೆಯಲ್ಲಿದ್ದರು.
ಸಂಘದ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ ವಂದಿಸಿದರು.
ಸಂಘದ 22 ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು, ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಮಹಾಸಭೆಯಲ್ಲಿ ಭಾಗವಹಿಸಿದ ಸದಸ್ಯರೆಲ್ಲರಿಗೂ ಕೂಪನ್ ನೀಡಿ ಗಿಫ್ಟ್ ಐಟಂ ನೀಡಲಾಯಿತು.