ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಶ್ರೀ ಗಣೇಶೋತ್ಸವ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

0

ಸೆ.16 ರಂದು ಸುಬ್ರಹ್ಮಣ್ಯ ಠಾಣೆಯಲ್ಲಿ ನಡೆಯಿತು. ಗಣೇಶ ಮೂರ್ತಿಯನ್ನು ವಿವಾದಿತ ಸ್ಥಳದಲ್ಲಿ ಸ್ಥಾಪನೆ ಮಾಡಬಾರದು. ಸಾರ್ವಜನಿಕರಿಗೆ ತೊಂದರೆಯಾಗುವ ಸ್ಥಳದಲ್ಲಿ ಕಾರ್ಯಕ್ರಮ ನಡೆಸಬಾರದು. ಶಾಂತಿಯುತವಾಗಿ ಹಬ್ಬವನ್ನು ನಡೆಸಬೇಕು.ಅಗ್ನಿಶಾಮಕ ದಳ,ತುರ್ತು ಚಿಕಿತ್ಸಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು.

ರಾತ್ರಿ 10 ಗಂಟೆಯೊಳಗೆ ಕಾರ್ಯಕ್ರಮವನ್ನು ಮುಗಿಸಬೇಕು ಎಂದು ಮೇಲಾಧಿಕಾರಿಗಳ ಸುತ್ತೋಲೆಯಲ್ಲಿರುವ ಮಾಹಿತಿಯನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ನೀಡಿದರು. ಶೋಭಾಯಾತ್ರೆಯ ಸಂದರ್ಭದಲ್ಲಿ ಡಿಜೆಯನ್ನು ಹಾಕುವಂತಿಲ್ಲ. ಹೆಚ್ಚು ಸೌಂಡ್ ಧ್ವನಿವರ್ಧಕ ಬಳಸಬಾರದು ಎಂದು ಹೇಳಿದರು.
ಈದ್ ಮಿಲಾದ್ ಹಬ್ಬವನ್ನು ಕೂಡಾ ಶಾಂತಿ, ಸೌಹಾರ್ದತೆಯಿಂದ ನಡೆಸಬೇಕು ಎಂದು ಹೇಳಿದರು. ತೊಂದರೆ, ಸಮಸ್ಯೆಗಳು ಆದರೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದರು. ಸಭೆಯಲ್ಲಿ ಧಾರ್ಮಿಕ ಮುಖಂಡರು,ಸಂಘ ಸಂಸ್ಥೆಗಳ ಪದಾಧಿಗಳು, ಗ್ರಾಮಸ್ಥರು ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಸಿಬ್ಬಂಧಿಗಳು ಉಪಸ್ಥಿತರಿದ್ದರು.