ಸುಳ್ಯ: ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘದ ಶಿಕ್ಷಕ ದಿನಾಚರಣೆ

0

ಸೆ.30ರಂದು ನಡೆಯುವ ಗುರುವಂದನ ಕಾರ್ಯಕ್ರಮದಲ್ಲಿ ಇಪ್ಪತ್ತು ವಿಶೇಷ ಶಿಕ್ಷಕರಿಗೆ ಗೌರವ: ಶಾಸಕಿ ಭಾಗೀರಥಿ ಮುರುಳ್ಯ

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘ ದ.ಕ ಜಿಲ್ಲಾ ಘಟಕ, ಎಂ ಬಿ ಫೌಂಡೇಶನ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಶಾಲೆಗಳಲ್ಲಿ ಸೇವಾ ನಿರತರಾಗಿರುವ ವಿಶೇಷ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆ.16 ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆ ಬಳಿಯಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ “ಸುಳ್ಯದಲ್ಲಿ ಸೆ.30 ರಂದು ನಡೆಸುವ ಗುರುವಂದನ ಕಾರ್ಯಕ್ರಮದಲ್ಲಿ ಮೂವತ್ತು ಶಿಕ್ಷಕರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ. ಆ ಕಾರ್ಯಕ್ರಮದಲ್ಲಿ ಇಪ್ಪತ್ತು ವಿಶೇಷ ಶಿಕ್ಷಕರಿಗೆ ಗೌರವಿಸಲಾಗುವುದೆಂದು ಈ ಸಂದರ್ಭದಲ್ಲಿ ಘೋಷಿಸಿದರು”
ಕಾರ್ಯಕ್ರಮದಲ್ಲಿ ಡಾ.ಉಮ್ಮರ್ ಬೀಜದಕಟ್ಟೆ ಮಾತನಾಡಿದರು. ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ಲಯನ್ಸ್ ಕ್ಲಬ್ ಅಧ್ಯಕ್ಷ ಲ|ವೀರಪ್ಪ ಗೌಡ, ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ವಸಂತ ಕುಮಾರ್, ಸಿಡಿಪಿಒ ಶ್ರೀಮತಿ ಶೈಲಜಾ, ಲಯನ್ಸ್ ವಿಶೇಷ ಮಕ್ಕಳ ಸಂಯೋಜಕರಾದ ಸಂಜೀವ ಕತ್ಲಡ್ಕ, ದೇವಿಪ್ರಸಾದ್ ಕುದ್ಪಾಜೆ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ರೇಷ್ಮಾ ಮಾರ್ಟಿನ್, ಎಂ.ಬಿ. ಫೌಂಡೇಶನ್ ಕೋಶಾಧಿಕಾರಿ ಪುಷ್ಪರಾಧ ಕೃಷ್ಣ, ಟ್ರಸ್ಟಿ ಸೂರಯ್ಯ ಮೊದಲಾದವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಸಂಚಾಲಕಿ ಹರಿಣಿ ಸದಾಶಿವ ಸ್ವಾಗತಿಸಿ , ಟ್ರಸ್ಟಿ ಶರೀಫ್ ಜಟ್ಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಂಘದ ಕಾರ್ಯದರ್ಶಿ ಸುಪ್ರಿತಾ ವಂದಿಸಿದರು.