ವಿಟ್ಲದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪ: ಸುಳ್ಯದ ವ್ಯಕ್ತಿಯ ಬಂಧನ

0

ಕರ್ನಾಟಕ ಕೇರಳ ಗಡಿ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಳ್ಯ ಬೀರಮಂಗಲ ನಿವಾಸಿ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಎಂದು ತಿಳಿದುಬಂದಿದೆ. ಕಲ್ಲಡ್ಕ
ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಆಟೋರಿಕ್ಷಾದಲ್ಲಿ ನಿಷೇಧಿತ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಆಧಾರದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.


ರಿಕ್ಷಾದಲ್ಲಿ.6.110 ಕೆಜಿ ತೂಕದ ಗಾಂಜಾ ಪತ್ತೆಯಾಗಿದ್ದು ಆರೋಪಿ ಬಳಿಯಲ್ಲಿದ್ದ ಎರಡು ಮೊಬೈಲ್ ಫೋನ್, 900 ರೂಪಾಯಿ ನಗದು, ಚಾಲನ ಪರವಾನಿಗೆ ಹಾಗೂ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.