ಬೆಳ್ಳಾರೆ : ಯುವಕನಿಗೆ ಹಲ್ಲೆ, ಪ್ರಕರಣ ದಾಖಲು

0

ವ್ಯಕ್ತಿಯೊಬ್ಬರ ಜತೆ ಕೆಲಸಕ್ಕೆ ಹೋಗುವ ವಿಚಾರದಲ್ಲಿ ತಕರಾರು ತೆಗೆದು ಯುವಕನೊಬ್ಬನಿಗೆ ಹಲ್ಲೆ ನಡೆಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಜ್ಜಾವರ ಗ್ರಾಮದ ಶಿವರಾಜ್ ಎಂ, ಬಿ (27) ಎಂಬವರು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ, ಸೆ.17ರಂದು ಸಂಜೆ ಶಿವರಾಜ್ ಅವರು ಬೆಳ್ಳಾರೆ ಗ್ರಾಮದ ಕೊಳಂಬಳ ಅಕ್ಕಿ ಮಿಲ್ಲ್ ಎದುರಿನ ರಸ್ತೆಯಲ್ಲಿ ಹೋಗುತ್ತಿದ್ದಾಗ, ನೆಟ್ಟಾರು ಕಡೆಯಿಂದ ಕಾರೊಂದರಲ್ಲಿ ಬಂದ ಆರೋಪಿಗಳಾದ ಹಕೀo,ಅತ್ತಾವುಲ್ಲ ,ರಫೀಕ್ ಅಜ್ಜಾವರ ಮತ್ತು ಆಶೀರ್ ಎಂಬವರು, ಶಿವರಾಜ್‌ರನ್ನು ಅಡ್ಡಗಟ್ಟಿ, ಜಮಾಲುದ್ದೀನ್ ಎಂಬವರೊಂದಿಗೆ ಕೆಲಸಕ್ಕೆ ಹೋಗುತ್ತಿರುವ ವಿಚಾರದಲ್ಲಿ ತಕರಾರು ತೆಗೆದು ಹಲ್ಲೆ ನಡೆಸಿದ್ದಾರೆ.ಅಲ್ಲದೆ ಜಾತಿನಿಂದನೆ ಮಾಡಿ ಜೀವಬೆದರಿಕೆ ಹಾಕಿ ತೆರಳಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಗಾಯಗೊಂಡ ಶಿವರಾಜ್ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು,ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.