ರಾಜ್ಯ ಒಕ್ಕಲಿಗರ ಸಂಘದಿಂದ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘಕ್ಕೆ ಕೆಂಪೇಗೌಡ ಜಯಂತಿ ಆಚರಣೆಯ ಪ್ರಯುಕ್ತ ಚೆಕ್ ವಿತರಣೆ

0

ರಾಜ್ಯ ಒಕ್ಕಲಿಗರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗೌಡರ ಯುವ ಸೇವಾ ಸಂಘಕ್ಕೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಅವರ ಶಿಫಾರಸಿನಂತೆ ಕೆಂಪೇಗೌಡ ಜಯಂತಿ ಆಚರಿಸಲು ರೂ 5೦,೦೦೦ ದ ಚೆಕ್ಕನ್ನು ವಿತರಿಸಲಾಯಿತು.

ಸುಳ್ಯದ ಗೌಡ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸುಳ್ಯ ಗೌಡರ ಯುವ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿಯವರು ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಚೆಕ್ ಪಡೆದುಕೊಂಡರು. ಈ ಸಂದರ್ಭದಲ್ಲಿ ಗೌಡ ಸಮುದಾಯ ಭವನದ ಅಭಿವೃದ್ಧಿ ಮತ್ತು ಸಮುದಾಯದ ಅಭಿವೃದ್ಧಿಯ ಬಗ್ಗೆ ಡಾ.ರೇಣುಕಾ ಪ್ರಸಾದ್ ಕೆ.ವಿ ಅವರು ಸಲಹೆ ಸೂಚನೆಯನ್ನು ನೀಡಿದ್ದರು. ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತಿನ ಮಾಜಿ ಅಧ್ಯಕ್ಷರಾದ ಎನ್.ಎ ರಾಮಚಂದ್ರ, ಡಾ. ಜ್ಯೋತಿ ಆರ್ ಪ್ರಸಾದ್ ಕುರುಂಜಿ,

ಗೌಡ ಸಮುದಾಯದ ಹಿರಿಯರಾದ ಜಾಕೆ ಮಾಧವ ಗೌಡ, ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲು, ಕೆ.ವಿ.ಜಿ ಐ.ಟಿ.ಐ ಕಛೇರಿ ಅಧಿಕ್ಷಕರಾದ ಭವಾನಿಶಂಕರ ಅಡ್ತಲೆ, ಕೆ.ವಿ.ಜಿ ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು ಮತ್ತು ಗೌಡ ಯುವ ಸೇವಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.