ನಾಗಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ

0

ಆಲೆಟ್ಟಿ ಗ್ರಾಮದ ನಾಗಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮತ್ತು ಪೋಷಣ್ ಮಾಸಾಚರಣೆ ಸೆ.15 ರಂದು ನಡೆಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷ ಶ್ರೀಮತಿ ಯೋಗರಾಣಿ,ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲ ನಾಗಪಟ್ಟಣ, ಮುಖ್ಯ ಶಿಕ್ಷಕಿ ಪುಷ್ಪ, ರೋಟರಿ ಸಿಟಿ ಅಧ್ಯಕ್ಷ ಗಿರೀಶ್ ನಾರ್ಕೋಡು, ಕಾರ್ಯದರ್ಶಿ ಕೇತನ್ ಪಿ.ಎನ್,ಆಶಾ ಕಾರ್ಯಕರ್ತೆ ಶ್ರೀಮತಿ ದೇವಕಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ಮಾಹಿತಿ ನೀಡಿದರು.
ಪೌಷ್ಠಿಕ ಆಹಾರ ತಯಾರಿಕೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅಂಗನವಾಡಿ ಮಕ್ಕಳಾದ ಬೃಂದಾ ಮತ್ತು ಭುವಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಕಾರ್ಯಕ್ರಮ ನಿರೂಪಿಸಿದರು.