ಗೌರಿತಾಳಿಗೆ ಸಾಧಕ ರತ್ನ ರಾಷ್ಟ್ರೀಯ ಪ್ರಶಸ್ತಿ

0

ಯೋಗ ಪಟು ಗೌರಿತಾಳಿಗೆ ಸಾಧಕ ರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆಪ್ಟೆಂಬರ್ 24ರಂದು ಬೆಳಗಾವಿ ಜಿಲ್ಲೆಯ ಗಂಧರ್ವ ಕಲಾ ಮಂದಿರದಲ್ಲಿ ನಡೆಯಿತು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಡಿನ ಸಮಚಾರ ಕನ್ನಡ ದಿನಪತ್ರಿಕೆ, ನಾಡಿನ ಸಮಚಾರ ಸೇವಾ ಸಂಘ ಗೋಕಾಕ್ ಇದರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಹಾಗೂ ಕವಿಗೋಷ್ಠಿ ಕಾರ್ಯ ಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಶರಣಬಸವ ದೇವರು, ಸಾಹಿತಿಗಳು,ಗಣ್ಯರ ಸಮ್ಮುಖದಲ್ಲಿ ಸಾಧಕ ರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಬಾಲ ಪ್ರತಿಭೆ ಕುಮಾರ ಸ್ವಾಮಿ ವಿದ್ಯಾಲಯದ ಮೂರನೇ ತರಗತಿ ವಿದ್ಯಾರ್ಥಿ ನಿಯಾಗಿದ್ದು ಡಾ. ಗೌತಮ್ ಮತ್ತು ಡಾ. ರಾಜೇಶ್ವರಿ ದಂಪತಿಯ ಪುತ್ರಿ.