ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಚೆನ್ನಪ್ಪ ಗೌಡ ಕಜೆಮೂಲೆ

0

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮತ್ತು ಜಾತ್ರೋತ್ಸವ ಸಮಿತಿ ಸೆ. 24ರಂದು ರಚನೆಯಾಗಿದ್ದು, ಸೇವಾ ಸಮಿತಿ ಅಧ್ಯಕ್ಷರಾಗಿ ಚೆನ್ನಪ್ಪ ಗೌಡ ಕಜೆಮೂಲೆ ಆಯ್ಕೆಯಾಗಿದ್ದಾರೆ.

ಸೇವಾ ಸಮಿತಿ ಗೌರವಾಧ್ಯಕ್ಷರಾಗಿ‌ ಅಡಕೆಹಿತ್ಲು ಸುಬ್ರಾಯ, ಕಾರ್ಯದರ್ಶಿಯಾಗಿ ಪ್ರಶಾಂತ್ ಕುಮಾರ್ ಕಿಲಂಗೋಡಿ, ಉಪಾಧ್ಯಕ್ಷರಾಗಿ ಅನಂತಕೃಷ್ಣ ತಂಟೆಪ್ಪಾಡಿ, ಕೋಶಾಧಿಕಾರಿಯಾಗಿ ಪ್ರಭಾಕರ ಆಳ್ವ ಬಜನಿಗುತ್ತು ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಎಂ. ಕೂಸಪ್ಪ ಗೌಡ ಮುಗುಪ್ಪು, ಜಗನ್ನಾಥ ರೈ ಉರುಂಬಿ, ಕೃಷ್ಣಪ್ಪ ಪೂಜಾರಿ ಮೂಲೆಮಜಲು, ರಾಮ್ ಪ್ರಸಾದ್‌ ಕಾಂಚೋಡು ಮತ್ತು ಗಂಗಾಧರ ತೋಟದಮೂಲೆ ಆಯ್ಕೆಯಾಗಿದ್ದಾರೆ. ವಿಶ್ವಸ್ಥರಾಗಿ ಕಳಂಜ ವಿಶ್ವನಾಥ ರೈ, ಶೀನಪ್ಪ ಗೌಡ ತೋಟದಮೂಲೆ ಮತ್ತು ವೆಂಕಟ್ರಮಣ ಗೌಡ ತಂಟೆಪ್ಪಾಡಿ ಸೇವೆ‌ ಸಲ್ಲಿಸುತ್ತಿದ್ದಾರೆ.

2024ರ ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿಯೂ ಈ ಸಂದರ್ಭದಲ್ಲಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಶ್ರೀನಾಥ್ ರೈ ಬಾಳಿಲ, ಗೌರವಾಧ್ಯಕ್ಷರಾಗಿ ಸಪ್ತಗಿರಿ ಪುರಂದರ ಗೌಡ, ಕಾರ್ಯಾಧ್ಯಕ್ಷರಾಗಿ ಚಂದ್ರಶೇಖರ ರೈ ಬಜನಿ, ಕಾರ್ಯದರ್ಶಿಯಾಗಿ ಕುಶಾಲಪ್ಪ ಗೌಡ, ಕೋಶಾಧಿಕಾರಿಯಾಗಿ ಸತೀಶ್ ಕಳಂಜ, ಉಪಾಧ್ಯಕ್ಷರಾಗಿ ಪುರುಷೋತ್ತಮ ತಂಟೆಪ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ಕೌಶಿಕ್ ಕೊಡಪಾಲ ಆಯ್ಕೆಯಾದರು. ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.