ರಾಜ್ಯೋತ್ಸವ ಪ್ರಶಸ್ತಿ : ತಜ್ಞರ ಸಲಹಾ ಸಮಿತಿ‌ ಸದಸ್ಯರಾಗಿ ಡಾ. ಪುರುಷೋತ್ತಮ ಬಿಳಿಮಲೆ

0

ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಆಯ್ಕೆಗೆ ಸಂಬಂಧಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ 30 ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಲಾಗಿದ್ದು , ಶಿಕ್ಷಣ ಕ್ಷೇತ್ರದಿಂದ ಡಾ. ಪುರುಷೋತ್ತಮ ಬಿಳಿಮಲೆಯವರು ಸಲಹಾ ಸಮಿತಿಗೆ ನೇಮಕಗೊಂಡಿದ್ದಾರೆ.

ಮೂಲತಃ ಪಂಜದವರಾಗಿರುವ ಡಾ.ಬಿಳಿಮಲೆಯವರು ಜಾನಪದ ವಿದ್ವಾಂಸರಾಗಿದ್ದು, ದೆಹಲಿ ಜೆ.ಎನ್.ಯು. ನಲ್ಲಿ‌ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.