ಕೆವಿಜಿ ಪಾಲಿಟೆಕ್ನಿಕ್ : ಸ್ವಚ್ಛತೆಯೆ ಸೇವೆ ಕಾರ್ಯಕ್ರಮ

0

ಕುರಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾ ರ್ಥಿ ಸಂಘದ ವತಿಯಿಂದ ಸ್ವಚ್ಛತತಯೇ ಸೇವೆ ಕಾರ್ಯಕ್ರಮ ನಡೆಯಿತು.

ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು
ಕಾಲೇಜಿನ ಆವರಣ ಹಾಗೂ ಆಟದ ಮೈದಾನವನ್ನು ಸ್ವಚ್ಛಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಕೆ, ಉಪ ಪ್ರಾಂಶುಪಾಲ ಶ್ರೀಧರ್ ಎಂ ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ್ ಎಂ ಎನ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಎನ್ನೆಸ್ಸೆಸ್ ಮತ್ತು ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಶ್ರಮದಾನ ಕಾರ್ಯದಲ್ಲಿ ಸಹಕರಿಸಿದರು.