ಅರಂತೋಡಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆ ಮತ್ತು ಯೋಧ ನಮನ ಕಾರ್ಯಕ್ರಮ

0

ಗ್ರಾಮೀಣಾಭಿವೃಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಾಲ್ಲೂಕು ಪಂಚಾಯತ್ ಸುಳ್ಯ ಅರಂತೋಡು ಗ್ರಾಮ ಪಂಚಾಯತ್ ಮತ್ತು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವುಗಳ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಹೀ ಸೇವಾ ವಿಶೇಷ ಗ್ರಾಮ ಸಭೆ ಹಾಗೂ ಯೋಧ ನಮನ ಕಾರ್ಯಕ್ರಮ ಅರಂತೋಡು ಪಂಚಾಯತ್ ಅಮೃತಾ ಸಭಾಭಾವನ ದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ನಿವೃತ ಶಿಕ್ಷಕ ಕೆ.ಆರ್.ಗಂಗಾಧರ ಕುರುಂಜಿ ನೆರವೇರಿಸಿದರು.ಅಧ್ಯಕ್ಷತೆ ಯನ್ನು ಅರಂತೋಡು ಗ್ರಾಮ ಪಂಚಾಯತ್ ಅದ್ಯಕ್ಷ ಕೇಶವ ಅಡ್ತಲೆ ವಹಿಸಿದರು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆರ್.ಗಂಗಾಧರ ಅಭಿನಂದನಾ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಸುಳ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ,ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ಭವಾನಿ ಸಿ.ಎ. ಅರಂತೋಡು ಕ್ರಷಿ ಪತ್ತಿನ ಉಪಾಧ್ಯಕ್ಷ ದಯಾನಂದ ಕುರುಂಜಿ,ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿ ನಿಯರು ಪ್ರಾರ್ಥಿಸಿದರು.ಪಂಚಾಯತ್ ಅಭಿವೃಧಿ ಅಧಿಕಾರಿ ಎಮ್.ಆರ್.ಜಯಪ್ರಕಾಶ್ ಸ್ವಾಗತಿಸಿದರು.ಸಭಾ ಕಾರ್ಯಕ್ರಮದ ಮೊದಲು ಅಡ್ಕಬಳೆ ಕಾಂಪ್ಲೆಕ್ಸ್ ಮುಂಭಾಗ ದಿಂದ ಮೆರವಣಿಗೆ ಹೊರಟು ತೊಡಿಕಾನ ದ್ವಾರದ ವರೆಗೆ ಹೋಗಿ ಪಂಚಾಯತ್ ಬಳಿ ಸಮಾಪ್ತಿಗೊಂಡಿತು.ಮಾಜಿ ಯೋಧ ರನ್ನು ಗೌರವಿಸಲಾಯಿತು.ಕಾರ್ಯಕ್ರಮವನ್ನು ಶಿಕ್ಷಕ ಕಿಶೋರ್ ಕಿರ್ಲಾಯ ಹಾಗೂ ಭವಾನಿ ಶಂಕರ ಅಡ್ತಲೆ ನಿರೂಪಿಸಿದರು.