ಗಾಂಧಿ ಜಯಂತಿ ಅಂಗವಾಗಿ ಸುಳ್ಯ ಅಮರ ಸಂಘಟನಾ ಸಮಿತಿ ರಿ. ಹಾಗೂ ವಿವಿಧ ಇಲಾಖೆಗಳು ಸಂಘ, ಸಂಸ್ಥೆಗಳ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಕಾರ್ಯಕ್ರಮಕ್ಕೆ ಜ್ಯೋತಿ ವೃತ್ತದ ಬಳಿ ದೀಪ ಬೆಳಗಿಸಿ ಚಾಲನೆ

ಸುಳ್ಯ ಅಮರ ಸಂಘಟನಾ ಸಮಿತಿ ರಿ., ನಗರ ಪಂಚಾಯತ್ ಸುಳ್ಯ, ತಾಲೂಕು ಕಚೇರಿ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕರ ಠಾಣೆ ಸುಳ್ಯ, ವಕೀಲರ ಸಂಘ ಸುಳ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 154ನೇ ಗಾಂಧಿ ಜಯಂತಿಯ ಅಂಗವಾಗಿ ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಎಂಬ ದ್ವೇಯ ಉದ್ದೇಶದಿಂದ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಸುಳ್ಯ ಜ್ಯೋತಿ ವೃತ್ತದ ಬಳಿ ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮವನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಪ್ರಧಾನ ಕಾರ್ಯದರ್ಶಿ ಕೆ ಸಿ ಅಕ್ಷಯ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಮರ ಸಂಘಟನಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಲಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಧಾಕರ್ ಎಂ ಎಚ್, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು, ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್, ಸುಳ್ಯ ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್, ಸುಳ್ಯ ಸರ್ಕಾರಿ ಪದವಿ ಕಾಲೇಜ್ ಪ್ರಾಂಶುಪಾಲರಾದ ಸತೀಶ್ ಕೊಯಿಂಗಾಜೆ, ರೋಟರಿ ವಿದ್ಯಾಸಂಸ್ಥೆ ಸಂಚಾಲಕ ಗಿರಿಜಾ ಶಂಕರ್ ತುದಿಯಡ್ಕ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜ್ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮಟ್ಟಿ, ಉಬರಡ್ಕ ರಾಜ್ ಸೌಂಡ್ಸ್ ಮಾಲಕ ರಾಜೇಶ್ ರೈ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸದಸ್ಯರುಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತಿ ಸದಸ್ಯ, ಅಮರ ಸುಳ್ಯ ರಮಣೀಯ ಸುಳ್ಯ ಸಂಘದ ಮುಖಂಡ ವಿನಯಕುಮಾರ್ ಕಂದಡ್ಕ ರವರನ್ನು ಸ್ವಚ್ಛ ಸುಳ್ಳದ ಕಾರ್ಯಕ್ರಮದಡಿ ಉತ್ತಮ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಜ್ಯೋತಿ ವೃತ್ತದಿಂದ ಸ್ವಚ್ಛತಾ ಕಾರ್ಯವನ್ನು ಆರಂಭಿಸಿ ಗಾಂಧಿನಗರವಾಗಿ ಎಪಿಎಂಸಿ ವಠಾರದಲ್ಲಿ ಮುಕ್ತಾಯಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ಆರೋಗ್ಯ ಇಲಾಖೆಯ ಮತ್ತು ನಗರ ಪಂಚಾಯತಿಯ ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಭಾಗವಹಿಸಿದ್ದರು.