ಜಯನಗರದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನ

0

ಗಾಂಧಿ ಜಯಂತಿ ಅಂಗವಾಗಿ ಜಯನಗರ ವಾರ್ಡಿನಲ್ಲಿ ಸ್ಥಳೀಯ ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ ರವರ ನೇತೃತ್ವದಲ್ಲಿ ಇಂದು ಸ್ವಚ್ಛತಾ ಅಭಿಯಾನ ನಡೆಯಿತು.

ಜಯನಗರ ಆದಿ ಮೊಗೇರ್ಕಳ ದೈವಸ್ಥಾನದ ವಠಾರದಿಂದ ಅಭಿಯಾನಕ್ಕೆ ಚಾಲನೆ ನೀಡಿ ಜಯನಗರ ಅಂಗನವಾಡಿ ಕೇಂದ್ರದಲ್ಲಿ ಸಮಾರೋಪ ಗೊಂಡಿತು.

ಈ ಅಭಿಯಾನದಲ್ಲಿ ದೈವಸ್ಥಾನ ಸಮಿತಿಯ ಸದಸ್ಯರು, ಜಯನಗರ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು, ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.

ಸಮಾರೋಪ ಕಾರ್ಯಕ್ರಮದಲ್ಲಿ ನ ಪಂ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆದಿ ಮೊಗೇರ್ಕಳ ದೈವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಕೇಶವ ಮಾಸ್ತರ್ ಹೊಸಗದ್ದೆ , ಪ್ರಧಾನ ಕಾರ್ಯದರ್ಶಿ ಸುಂದರ ಕುತ್ಪಾಜೆ,ಜಯನಗರ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ,

ಶಾಲಾ ಎಸ್ಟಿಎಂಸಿ ಅಧ್ಯಕ್ಷ ಮುದ್ದಪ್ಪ, ಅಂಗನವಾಡಿ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿ,ಶಾಲಾ ಶಿಕ್ಷಕ ವೃಂದದವರು,ಅಂಗನವಾಡಿ ರಕ್ಷಣಾ ಸಮಿತಿ ಅಧ್ಯಕ್ಷರು ಸದಸ್ಯರುಗಳು ಉಪಸ್ಥಿತರಿದ್ದರು.