ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಶಿವಪ್ರಸಾದ್ ಆಲೆಟ್ಟಿ ಯವರಿಗೆ ವರ್ಷದ ಶ್ರೇಷ್ಠ ಭಜನಾ ಸಾಧಕ ಪ್ರಶಸ್ತಿ ಪ್ರದಾನ

0

ಧರ್ಮಸ್ಥಳ ಮಂಜುನಾಥೇಶ್ವರ ಪರಿಷತ್ ವತಿಯಿಂದ ಕೊಡಮಾಡಲ್ಪಡುವ ವರ್ಷದ ಶ್ರೇಷ್ಠ ಭಜನಾ ಸಾಧಕ ಪ್ರಶಸ್ತಿಯನ್ನು ಶಿವಪ್ರಸಾದ್ ಆಲೆಟ್ಟಿ ಯವರಿಗೆ ಭಜನಾ ತರಬೇತಿ ಕಮ್ಮಟದ ಸಮಾರೋಪ ದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಧರ್ಮಸ್ಥಳ ಕ್ಷೇತ್ರದಲ್ಲಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ ಉಪಾಧ್ಯಕ್ಷರಾದ ಮಾತೃಶ್ರೀ ಡಾ| ಹೇಮಾವತಿ ವಿ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ , ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳಾಗಿ ಕನ್ನಡದ ಪೂಜಾರಿ ಹೀರೆಮಗಳೂರು ಕಣ್ಣನ್, ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ ರಾಜ್ಯಾಧ್ಯಕ್ಷ ಬಾಲಕೃಷ್ಣ ಪಂಜ, ಯೋಗಗುರು ರಾಘವೇಂದ್ರ, ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಪುರುಷೋತ್ತಮ ಪಿ, ಸುರೇಶ್ ಮೊಯಿಲಿ ಉಪಸ್ಥಿತರಿದ್ದರು.


ರಾಜ್ಯದ ಬೇರೆ ಜಿಲ್ಲೆಗಳಿಂದ ಆಯ್ಕೆಯಾದ ಎಲ್ಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಭಜನಾ ಮಂಡಳಿಯ ಸದಸ್ಯರು ಮತ್ತು ಭಜನಾ ತರಬೇತಿ ಕಮ್ಮಟದ ಶಿಬಿರಾರ್ಥಿಗಳು ಭಾಗವಹಿಸಿದರು.