ಬಸ್ಸು ಏರುತ್ತಿದ್ದಾಗ ಆಯ ತಪ್ಪಿ ಬಿದ್ದು ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

0

ಆಲೆಟ್ಟಿ ಗ್ರಾಮದ ಕೋಲ್ಚಾರಿನ ಕೂಳಿಯಡ್ಕ ನಿವಾಸಿ ಕರುಣಾಕರ ರವರು ಇಂದು ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಕಳೆದ ಅ.6 ರಂದು ಸುಳ್ಯ ಗಾಂಧಿನಗರದಲ್ಲಿ ಬಸ್ ಏರುವ ಸಂದರ್ಭದಲ್ಲಿ ಆಯ ತಪ್ಪಿ ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಅವರನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮದ್ಯ ಸೇವನೆ ಮಾಡಿದ್ದುದರಿಂದ ಅವರ ಆರೋಗ್ಯದಲ್ಲಿ ಏರು ಪೇರಾದ ಕಾರಣಕ್ಕೆ ಮರುದಿನ ಹೆಚ್ಚಿನ ಚಿಕಿತ್ಸೆ ಗಾಗಿ ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆಸ್ಪಂದಿಸದಿದ್ದುದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ‌ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.


ಮೃತರು ತಂದೆ ನಾರಾಯಣ ಬೆಳ್ಚಪ್ಪಾಡ ,ತಾಯಿ ಶ್ರೀಮತಿ ದೇವಕಿ, ಸಹೋದರ ದಾಮೋದರ ಕೂಳಿಯಡ್ಕ, ಪ್ರಸಾದ್, ರಾಧಾಕೃಷ್ಣ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರುಅವಿವಾಹಿತರಾಗಿದ್ದು ಕೂಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.