ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಭಾವ ಸಂಗಮ ಕಾರ್ಯಕ್ರಮ

0

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ಭಾವ ಸಂಗಮ ಕಾರ್ಯಕ್ರಮವು ಅ.9 ರಂದು ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ.ಸೀತಾರಾಮ ರೈ ಸವಣೂರುರವರು ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಂಗೀತ ಹೇಗೆ ಪೂರಕ ಎಂಬುದನ್ನು ವಿವರಿಸುವುದರೊಂದಿಗೆ ಹಲವು ರೋಗಗಳ ನಿವಾರಣೆಯಲ್ಲೂ ಸಂಗೀತ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂಬುದನ್ನುಇವತ್ತು ವಿಜ್ಞಾನಿಗಳು ಸಾಬೀತುಪಡಿಸಿದ್ದಾರೆ ಎಂಬುದಾಗಿ ತಿಳಿಸಿದರು.

ಸಂಸ್ಥೆಯ ಉಪಪ್ರಾಂಶುಪಾಲರು ಹಾಗೂ ಸಾಹಿತ್ಯ ಸಂಘದ ಸಂಘಟಕರಾದ ಶೇಷಗಿರಿ ಎಂ. ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಅಶ್ವಿನ್ ಎಲ್.ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ.ನಾರಾಯಣ ಮೂರ್ತಿ, ಹಾಗೂ ಸಾಹಿತ್ಯ ಸಹಸಂಘಟಕರಾದ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಎ ವಿದ್ಯಾರ್ಥಿ ಚೇತನ್ ರೈ ಸ್ವಾಗತಿಸಿ, ಸಾಹಿತ್ಯ ಸಂಘದ ಕಾರ್ಯದರ್ಶಿಯಾದ ತೃತೀಯ ಬಿ.ಎ ವಿದ್ಯಾರ್ಥಿ ಪಿ.ಪ್ರವೀಣ ವಂದಿಸಿದರು.


ಅಂತಿಮ ಬಿ.ಎ ವಿದ್ಯಾರ್ಥಿಯಾದ ಶಮೀರ್ ಕಾರ್ಯಕ್ರಮದ ನಿರೂಪಿಸಿದರು. ವಿದ್ಯಾರ್ಥಿನಿಯಾದ ಶ್ರಾವ್ಯವಾಣಿ ಮತ್ತು ತಂಡದವರು ಪ್ರಾರ್ಥಿಸಿದರು.ಸಭಾ ಕಾರ್ಯಕ್ರಮದ ನಂತರ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಚೈತ್ರಿಕಾ ಕೋಡಿಬೈಲು ರವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಇವರಿಗೆ ಹಿನ್ನಲೆ ಗಾಯಕರಾಗಿ ಸುಭಾಷ್ ಹೆಬ್ಬಾರ್, ತಬಲದಲ್ಲಿ ಹಾಗೂ ಹಾರ್ಮೋನಿಯಂನಲ್ಲಿ ಸಾಯಿ ಸುಬ್ರಹ್ಮಣ್ಯ ಭಟ್ ಸಹಕರಿಸಿದರು.