ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ವಾರ್ಷಿಕ ಮಹಾಸಭೆ

0

ಅಧ್ಯಕ್ಷರಾಗಿ ಪದ್ಮನಾಭ ಬೀಡು ಆಯ್ಕೆ


ಸ್ನೇಹಿತರ ಕಲಾ ಸಂಘ (ರಿ.) ಬೆಳ್ಳಾರೆ ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಅ. 8 ರಂದು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ಸಭಾಂಗಣ ಸ್ನೇಹ ಸದನದಲ್ಲಿ ಸಂಘದ ಅಧ್ಯಕ್ಷರಾದ ವಸಂತ ಉಲ್ಲಾಸ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘದ ಕಾರ್ಯದರ್ಶಿ ಆನಮದ ಉಮಿಕ್ಕಳ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಹಾಲಿಂಗ ಪಾಟಾಳಿ ಕುರುಂಬುಡೇಲು ವಾರ್ಷಿಕ ಜಮಾ ಖರ್ಚು ಲೆಕ್ಕಪತ್ರ ಮಂಡಿಸಿದರು. ಸಭೆಯು ಈ ವರದಿ ಮತ್ತು ಲೆಕ್ಕಪತ್ರಗಳನ್ನು ಧ್ವನಿಮತದಿಂದ ಅಂಗೀಕರಿಸಿತು. ನಂತರ ಗತ ವರ್ಷ ನಡೆದ ಕಾರ್ಯಕ್ರಮಗಳ ಅವಲೋಕನ ನಡೆಯಿತು. ಸಂಘಕ್ಕೆ ಸಿದ್ದಪಡಿಸಲಾದ ನೂತನ ಕಾರ್ಯಕ್ರಮಗಳನ್ನು ಅಂಗೀಕರಿಸಲಾಯಿತು.. ಸಭೆಯಲ್ಲಿ ಸೇರಿದ ಸದಸ್ಯರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ನಂತರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಅಧ್ಯಕ್ಷರಾಗಿ ಪದ್ಮನಾಭ ಬೀಡು, ನಿಕಟಪೂರ್ವಾಧ್ಯಕ್ಷರಾಗಿ ವಸಂತ ಉಲ್ಲಾಸ್ ಉಪಾಧ್ಯಕ್ಷರಾಗಿ ಸುಪ್ರಿತ್ ಕುಲಾಲ್ ಬಸ್ತಿಗುಡ್ಡೆ ಕಾರ್ಯದರ್ಶಿಯಾಗಿ ವಸಂತ ಗೌಡ ಪಡ್ಪು, ಕೋಶಾಧಿಕಾರಿಯಾಗಿ ಶ್ರೀನಿವಾಸ ಕುರುಂಬುಡೇಲು ಜತೆ ಕಾರ್ಯದರ್ಶಿಯಾಗಿ ಸದಾಶಿವ ಬಸ್ತಿಗುಡ್ಡೆ, ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಜಯಂತ ಪೂಜಾರಿ ಕವಿನಮೂಲೆ ಹಾಗೂ ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ, ಜನಾರ್ಧನ ಪೂಜಾರಿ ಚೀಮುಳ್ಳು , ಮಹಾಲಿಂಗ ಪಾಟಾಳಿ ಕುರುಂಬುಡೇಲು , ಚಿದಾನಂದ ಪನ್ನೆ, ಉಮೇಶ್ ಕಜೆ ನೆಟ್ಟಾರು, ಆನಂದ ಉಮಿಕ್ಕಳ ಇವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಸದಸ್ಯರ ಸೂಚನೆ ಹಾಗು ಅನುಮೋದನೆಯೊಂದಿಗೆ ಆರಿಸಲಾಯಿತು.

ನಿಕಟಪೂರ್ವಾಧ್ಯಕ್ಷ ಸಂಜಯ್ ನೆಟ್ಟಾರು ಉಪಾಧ್ಯಕ್ಷರಾದ ವಸಂತ ಗೌಡ ಪಡ್ಪು ಜತೆ ಕಾರ್ಯದರ್ಶಿ ಶ್ರೀನಿವಾಸ ಕುರುಂಬುಡೇಲು, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀನಿವಾಸ ಕುರುಂಬುಡೇಲು ಸ್ವಾಗತಿಸಿ, ಆನಂದ ಉಮಿಕ್ಕಳ ವಂದಿಸಿದರು, ಮಹಾಲಿಂಗ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು.