ಸುಬ್ರಹ್ಮಣ್ಯ:ಕಾರಿನ ಗಾಜು ಒಡೆದು ಕಳ್ಳತನ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಭಕ್ತಾಧಿಯೋರ್ವರ ಕಾರಿನ ಗಾಜು ಒಡೆದು ಕಳ್ಳತನ ನಡೆಸಿರುವ ಘಟನೆ ಅ.9 ರಂದು ವರದಿಯಾಗಿದೆ.

ಕೆ.ಎಲ್ 60 ಎನ್ 4003 ಕಾರಿನಲ್ಲಿ ಸುಬ್ರಹ್ಮಣ್ಯ ಕ್ಕೆ ಬಂದು ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ , ದೇವಸ್ಥಾನಕ್ಕೆ ಹೋಗಿ ಬಳಿಕ ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ಕಾರಿನ ಬಳಿ ಬಂದು ನೋಡಿದಾಗ , ಕಾರಿನ ಹಿಂಬದಿಯ ಗಾಜನ್ನು ಪುಡಿ ಮಾಡಿ ಕಾರಿನಲ್ಲಿದ್ದ ಎರಡು ಬ್ಯಾಗ್ ಗಳನ್ನು ಯಾರೋ ಕಳ್ಳರು ತೆಗೆದುಕೊಂಡು ಹೋಗಿರುವುದು ತಿಳಿದುಬಂದಿದೆ.

ಕಳವಾಗಿರುವ ಬ್ಯಾಗ್ ನಲ್ಲಿ ಅಂದಾಜು 14 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಹಾಗೂ ಆಧಾರ ಕಾರ್ಡ್ ,ಎಟಿಎಂ, ಕಳವಾಗಿರುತ್ತದೆ. ಈ ಬಗ್ಗೆ ಕೇರಳ ನಿವಾಸಿ ಸುಯಿಶ್‌ ಟಿ ಸಿ ಎಂಬವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.