ಮರ್ಕಂಜ ಗ್ರಾ.ಪಂ.ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ

0

ಇಂದು ರಾಜ್ಯಪಾಲರಿಂದ ಪ್ರಶಸ್ತಿ ಸ್ವೀರಿಸಿದ ಪಂಚಾಯತ್

ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ಮರ್ಕಂಜ ಗ್ರಾಮ ಪಂಚಾಯತ್ ಡಾ.ಶಿವರಾಮ ಕಾರಂತ ಪ್ರಶಸ್ತಿ ಗೆ ಆಯ್ಕೆಯಾಗಿದ್ದು, ಇಂದು ಪ್ರಶಸ್ತಿ ಸ್ವೀಕರಿಸಿದರು.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಕಾರಂತ ಟ್ರಸ್ಟ್, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಪಂಚಾಯತ್ ಗಳಿಗೆ ಪ್ರಶಸ್ತಿ ಪ್ರದಾನ ನಡೆಯಿತು.

ಕೋಟತಟ್ಟುವಿನ ಡಾ.ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಕಾರಂತೋತ್ಸವ ನಡೆದಿದ್ದು, ಪ್ರಶಸ್ತಿಯನ್ನು ಕರ್ನಾಟಕ ರಾಜ್ಯಪಾಲರಾದ ಧಾವರ್ ಚಂದ್ ಗೆಹ್ಲೋತ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕಾರದ ಸಂದರ್ಭದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ‌ ಗೀತಾ‌ ಹೊಸೊಳಿಕೆ, ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಪಾರೆಮಜಲು, ಸೇವಾಜೆ, ನಿಕಟಪೂರ್ವಾಧ್ಯಕ್ಷೆ ಶ್ರೀಮತಿ ಪವಿತ್ರ ಗುಂಡಿ, ನಿಕಟಪೂರ್ವ ಉಪಾಧ್ಯಕ್ಷ ಗೋವಿಂದ ಅಳವುಪಾರೆ ಸದಸ್ಯರುಗಳಾದ ಯಶವಂತ ಸೂಟೆಗದ್ದೆ, ರಮತ ಕುದ್ಕುಳಿ, ಶ್ರೀಮತಿ ನಾಗವೇಣಿ ಶೆಟ್ಟಿಗದ್ದೆ, ಪಿಡಿಒ ಜಯಂತ, ಸಿಬ್ಬಂದಿಗಳಾದ ಪುಟ್ಟರಾಜು ಶೆಟ್ಟಿಮಜಲು, ಶ್ರೀಮತಿ ನೇತ್ರಾ, ಕು.ಆಶಾ, ದೇವಿಪ್ರಸಾದ್, ಲೋಹಿತ್, ಷಣ್ಮುಖ ರವರಿದ್ದರು.