ಆಲೆಟ್ಟಿ: ಯುವಕ ಮಂಡಲ ವತಿಯಿಂದ ಮುಕ್ತ ಡಬಲ್ಸ್ ಕೇರಂ ಪಂದ್ಯಾಟದ ಉದ್ಘಾಟನೆ

0

ಆಲೆಟ್ಟಿ ಯುವಕ ಮಂಡಲದ ಆಶ್ರಯದಲ್ಲಿ ಮುಕ್ತ ಡಬಲ್ಸ್ ಕ್ಯಾರಂ ಪಂದ್ಯಾಟವು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಅ. 15ರಂದು ನಡೆಯಿತು.


ಪಂದ್ಯಾಟದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ವಸಂತ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಯು.ಮಂಡಲದ ಅಧ್ಯಕ್ಷ ಜಯಪ್ರಕಾಶ್ ಕುಡೆಕಲ್ಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಲಕ್ಷ್ಮಣ ಗೌಡ ಪರಿವಾರ, ಯವಕ ಮಂಡಲ ಗೌರವಾಧ್ಯಕ್ಷ ರಾಮಚಂದ್ರ ಆಲೆಟ್ಟಿ, ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೇಷ್ಠ ಭಜನಾ ಸಾಧಕ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಲೆಟ್ಟಿ ಯವರನ್ನು ಯುವಕ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.

ಯು.ಮಂ ಕಾರ್ಯದರ್ಶಿ ಧನಂಜಯ ಆಲೆಟ್ಟಿ ಪ್ರಾರ್ಥಿಸಿದರು. ಪ್ರವೀಣ್ ಆಲೆಟ್ಟಿ ಸ್ವಾಗತಿಸಿ, ವಿನೀತ್ ಕುಡೆಕಲ್ಲು ವಂದಿಸಿದರು. ಯುವಕಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು. ತಾಲೂಕು ಜಿಲ್ಲೆ ಹಾಗೂ ಅಂತರಾಜ್ಯಗಳಿಂದ ಆಗಮಿಸಿ ಕ್ಯಾರಂ ಪಂದ್ಯಾಟದಲ್ಲಿ ಸ್ಪರ್ಧಿಗಳು ಭಾಗವಹಿಸಿದರು. ಆಗಮಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಕ್ರೀಡಾ ಅಭಿಮಾನಿಗಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.