ಸುಳ್ಯ ದಸರಾ ಉತ್ಸವ ಆರಂಭ

0

ಜ್ಯೋತಿ ವೃತ್ತದಿಂದ ಶಾರದಾದೇವಿ ಮೂರ್ತಿಯ ಪ್ರತಿಷ್ಠಾ ಮೆರವಣಿಗೆ

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ , ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ (ರಿ.) ದಸರಾ ಉತ್ಸವ ಸಮಿತಿಯ ವತಿಯಿಂದ 52ನೇ ವರ್ಷದ ಶ್ರೀ ಶಾರದಾಂಬ ಉತ್ಸವವು ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ಶ್ರೀ ಶಾರದಾಂಬ ಕಲಾವೇದಿಕೆಯಲ್ಲಿ ಇಂದಿನಿಂದ ಒಂಭತ್ತು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದ್ದು,
ಅ.20ರಂದು ಬೆಳಿಗ್ಗೆ ನಗರದ ಜ್ಯೋತಿ ವೃತ್ತದಿಂದ ಶ್ರೀ ಶಾರದಾದೇವಿ ಮೂರ್ತಿಯ ಪ್ರತಿಷ್ಠಾ ಮೆರವಣಿಗೆಯು ಶ್ರೀ ಶಾರದಾಂಬ ಮತ್ತು ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳ ಹಾಗೂ ಭಕ್ತಾದಿಗಳ ಉಪಸ್ಥಿತಿಯಲ್ಲಿ
ನಡೆಯಿತು.


ದಸರಾ ಉತ್ಸವದ ಅಂಗವಾಗಿ ಬೆಳಿಗ್ಗೆ ಗಣಪತಿ ಹವನ ನಡೆಯಿತು. ಉದ್ಯಮಿ ಕೃಷ್ಣ ಕಾಮತ್ ಅರಂಬೂರು ಅವರು ಪ್ರತಿಷ್ಠಾಪನೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ದೇವಿಯ ಪ್ರತಿಷ್ಠಾ ಮೆರವಣಿಗೆಯಲ್ಲಿ ಭಾಗವಹಿಸಿದರು.