ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾ ಯಾಗ

0

ಸುಳ್ಯದ ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಚಂಡಿಕಾ ಯಾಗವು ವೇದಮೂರ್ತಿ ದಿನೇಶ ಬನ್ನಿತ್ತಾಯ ಅವರ ನೇತೃತ್ವದಲ್ಲಿ ಅ.20ರಂದು ನಡೆಯಿತು.

ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಅ.20ರಂದು ಬೆಳಿಗ್ಗೆ ಸಣ್ಣ ಮಕ್ಕಳಿಗೆ ಅಕ್ಷರಾಭ್ಯಾಸ, ವಿದ್ಯಾರಂಭ, ಚಂಡಿಕಾಯಾಗ ನಡೆಯಿತು. ‌
ಅ.19ರಂದು ಶ್ರೀ ಮಹಾಗುರು ಕಾಲಭೈರವೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ನಡೆಯಿತು. ನವರಾತ್ರಿ ಮತ್ತು ವಿಜಯದಶಮಿ ಉತ್ಸವದ ಪ್ರಯುಕ್ತ ಪ್ರತೀ ದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯುತ್ತಿದೆ.