ಕೊಯನಾಡು: ಬೇರ್ಪಟ್ಟ ಕಾರಿನ ಚಕ್ರ ಪೊಲೀಸ್ ಬ್ಯಾರಿಕೇಡ್ ಗೆ ಢಿಕ್ಕಿ : ಜಖಂ

0

ಅಪಾಯದಿಂದ ಪಾರಾದ ಪ್ರಯಾಣಿಕರು

ಕಾರಿನ ಚಕ್ರ ಬೇರ್ಪಟ್ಟ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಬ್ಯಾರಿಕೇಡ್ ಗೆ ಕಾರು ಢಿಕ್ಕಿ ಹೊಡೆದು ಕಾರು ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಅ.21ರಂದು ಸಂಜೆ ಸಂಭವಿಸಿದೆ.

ಮಡಿಕೇರಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಮಂಗಳೂರು ಮೂಲದ ಪ್ರಯಾಣಿಕರಿದ್ದ ಕಾರಿನ ಚಕ್ರ ಬೇರ್ಪಟ್ಟ ಪರಿಣಾಮವಾಗಿ ಕೊಯನಾಡಿನ ಅರಣ್ಯ ಇಲಾಖೆಯ ಕಛೇರಿಯ ಮುಂಭಾಗದ ಮುಖ್ಯರಸ್ತೆಯಲ್ಲಿದ್ದ ಪೊಲೀಸ್ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಐದು ಮಂದಿ ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.