ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣ ಹೋಮ, ಆಯುಧ ಪೂಜೆ ಮತ್ತು ಶಾರದಾ ಪೂಜೆ

0

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಗಣ ಹೋಮ, ಆಯುಧ ಪೂಜೆ ಮತ್ತು ಶಾರದಾ ಪೂಜೆಯು ಅಕ್ಟೋಬರ್ 21ರಂದು ಕೆವಿಜಿ ಐಪಿಎಸ್ ಸಭಾಂಗಣದಲ್ಲಿ ನಡೆಯಿತು.


ಬೆಳಿಗ್ಗೆ ಸುಳ್ಯ ಕುರುಂಜಿ ಭಾಗ್ ನಲ್ಲಿರುವ ಎ ಓ ಎಲ್ ಇ ಆಫೀಸ್ ನಲ್ಲಿ ಗಣ ಹೋಮ, ನಂತರ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಆಯುಧ ಪೂಜೆ, ಭಜನಾ ಸಂಕೀರ್ತನೆ, ಶಾರದಾ ಪೂಜೆ ಮತ್ತು ಮಹಾಪೂಜೆ ನಡೆಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಪುರೋಹಿತ ನಾಗರಾಜ್ ಭಟ್ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.

ಡಾ. ಜ್ಯೋತಿ ಆರ್. ಪ್ರಸಾದ್, ಮೌರ್ಯ ಪ್ರಸಾದ್, ಡಾ. ಉಜ್ವಲ್ ಊರುಬೈಲ್, ವಿವಿಧ ಸಂಸ್ಥೆಗಳ ಪ್ರಾಂಶುಪಾಲರು, ಸಿಬ್ಬಂದಿಗಳು ಭಾಗವಹಿಸಿದ್ದರು. ಹಲವು ಗಣ್ಯರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.