ಮುಗುಪ್ಪು ಕೂಸಪ್ಪ ಗೌಡರಿಗೆ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ

0

ಗೋಕಾಕದ ನಾಡಿನ ಸಮಾಚಾರ ಸೇವಾ ಸಂಘ ಹಾಗೂ ನಾಡಿನ ಸಮಾಚಾರ ದಿನ ಪತ್ರಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕೊಡ ಮಾಡುವ ರಾಜ್ಯ ಮಟ್ಟದ ಕರ್ನಾಟಕ ಸಾಧಕ ರತ್ನ ಪ್ರಶಸ್ತಿಗೆ ಕಳಂಜ – ಬಾಳಿಲ ಸಹಕಾರಿ ಸಂಘದ ಅಧ್ಯಕ್ಷ ಮುಗುಪ್ಪು ಕೂಸಪ್ಪ ಗೌಡರು ಭಾಜನರಾಗಿದ್ದಾರೆ.
ನ.೧೮ರಂದು ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.