p>

ಸುಬ್ರಹ್ಮಣ್ಯ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

0

ಸುಬ್ರಹ್ಮಣ್ಯ ಠಾಣೆಯಲ್ಲಿ ನವರಾತ್ರಿಯ ಪ್ರಯುಕ್ತ ಆಯುಧ ಪೂಜಾ ಕಾರ್ಯಕ್ರಮ ಅ. 22 ರಂದು ನಡೆಯಿತು.

ಅರ್ಚಕರು ದುರ್ಗಾ ಪೂಜೆ ನೇರವೇರಿಸಿದರು. ಆಯುಧ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಠಾಣೆಯ ಎಸ್.ಐ ಕಾರ್ತಿಕ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ, ಪಂಜ ಅರಣ್ಯ ಇಲಾಖೆಯ ವಲಯಾರಣ್ಯಧಿಕಾರಿ ಗಿರೀಶ್, ಎ.ಎಸ್.ಐ ಕರುಣಾಕರ, ಧನೇಶ್ ಹಾಗೂ‌ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.