p>

ರೆಂಜಾಳ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ಹೊಸ ಅಕ್ಕಿ ಬಲುವಾಡು ಕೂಟ ಮತ್ತು ಆಯುಧಪೂಜೆ

0

ಮರ್ಕಂಜ ಹಾಗೂ ನೆಲ್ಲೂರು ‌ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ಹೊಸ ಅಕ್ಕಿ ಬಲಿವಾಡು ಕೂಟ ಮತ್ತು ಆಯುಧ ಪೂಜಾ ಕಾರ್ಯಕ್ರಮ ವು ಇಂದು ನಡೆಯಿತು. ಕಾರ್ಯಕ್ರಮ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ, ಶ್ರೀ ಮಂಜುನಾಥ ಮಹಿಳಾ ಭಜನಾ ಮಂಡಳಿ ಗಟ್ಟಿಗಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷರು, ಸದಸ್ಯರು, ದೇವಾಲಯದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಶ್ರೀ ಶಾಸ್ತಾವು ಯುವಕ‌ ಮಂಡಲದ ಅಧ್ಯಕ್ಷರು ಸದಸ್ಯರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು. ಊರ ಭಕ್ತಾಧಿಗಳು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.