ಆಯುಧ ಪೂಜಾ ಅಂಗವಾಗಿ ಶ್ರೀ ಚೆನ್ನಕೇಶವ ದೇವಸ್ಥಾನ ಮತ್ತು ಸುಳ್ಯ ಪೊಲೀಸ್ ಠಾಣೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಜರಗುತ್ತಿರುವ 52ನೇ ವರ್ಷದ ಶ್ರೀಶಾರದಾಂಬಾ ಉತ್ಸವ ಸುಳ್ಯ ದಸರಾ ಕ್ಕೆ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಇಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಬಳಿಕ ಅಲ್ಲಿಂದ ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು ಇಂದು ಠಾಣೆಯಲ್ಲಿ ನಡೆಯುವ ಆಯುಧ ಪೂಜಾ ಕಾರ್ಯಕ್ರಮದ ವೀಕ್ಷಣೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.