ಸಂಪಾಜೆ ಜನಪ್ರತಿನಿಧಿಗಳ ನಿಯೋಗದಿಂದ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ

0

ಪ್ಲಾಟಿಂಗ್ ಸಮಸ್ಯೆ ಹಾಗೂ ಸ್ಮಶಾನ ಸ್ಥಳದ ಕುರಿತು ಸಚಿವರಿಗೆ ಮನವಿ

ಕೆ.ಪಿ.ಸಿ.ಸಿ. ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಟಿ. ಎಂ ಶಹೀದ್ ತೆಕ್ಕಿಲ್ ಅವರ ನೇತೃತ್ವದಲ್ಲಿ ಸಂಪಾಜೆಯ ಜನಪ್ರತಿನಿಧಿಗಳ ನಿಯೋಗವು ಬೆಂಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಸಂಪಾಜೆ ಗ್ರಾಮದ ಪ್ಲಾಟಿಂಗ್ ಸಮಸ್ಯೆ ಹಾಗೂ ಸ್ಮಶಾನ ಸ್ಥಳದ ಸಮಸ್ಯೆ ಕುರಿತಂತೆ ಸಚಿವರ ಗಮನಕ್ಕೆ ತರಲಾಯಿತು.

ಮಾಹಿತಿ ಪಡೆದ ಸಚಿವ ಖಂಡ್ರೆ ಅವರು ಎರಡೂವರೆ ಎಕ್ರೆ ಸ್ಮಶಾನಕ್ಕೆ ಸ್ಥಳ ನೀಡಲು ಅವಕಾಶ ಇದ್ದು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರೆಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್.ಕೆ. ಹನೀಫ್ ಕಲ್ಲುಗುಂಡಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ ಸಂಪಾಜೆ, ಶ್ರೀಮತಿ ಸುಂದರಿ ಮುಂಡಡ್ಕ, ಪಾರ್ವರ್ಡ್ ಗ್ರೂಪ್ ನ ಡಾ. ಉಮ್ಮರ್ ಬೀಜದಕಟ್ಟೆ, ಸಲೀಂ ಪೆರುಂಗೋಡಿ, ಹಾರಿಸ್ ಪಿ. ಎಂ, ಅಯ್ಯುಬ್ ಗೂನಡ್ಕ, ಮಂಜುನಾಥ್, ಉನೈಸ್ ಗೂನಡ್ಕ, ಹನೀಫ್ ಕಲ್ಲುಗುಂಡಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ, ಮೊದಲಾದವರು ಉಪಸ್ಥಿತರಿದ್ದರು.