ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ

0

ಒಂದು ತಿಂಗಳೊಳಗೆ ವೈದ್ಯರ ನೇಮಕವಾಗದಿದ್ದಲ್ಲಿ

ಆಸ್ಪತ್ರೆ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು ಎರಡು ತಿಂಗಳಿನಿಂದ ಖಾಯಂ ವೈದ್ಯರ ಕೊರತೆ ಇದ್ದು ಸರಕಾರ ಕೂಡಲೇ ವೈದ್ಯರ ನೇಮಕ ಮಾಡಬೇಕು.


ವೈದ್ಯರಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.
ಈ ಬಗ್ಗೆ ಇಲಾಖಾಧಿಕಾರಿಗಳಿಗೆ 25 ಸಲ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಈ ಮನವಿ ಮಾಡಿ ಒಂದು ತಿಂಗಳೊಳಗೆ ವೈದ್ಯರನ್ನು ನೇಮಕ ಮಾಡದಿದ್ದಲ್ಲಿ ಆಸ್ಪತ್ರೆ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತರಾದ ಕೆ.ಕೆ.ನಾಯ್ಕ್ ಕೊಡಿಯಾಲ ಮತ್ತು ಪ್ರೇಮಚಂದ್ರ ಬೆಳ್ಳಾರೆ ತಿಳಿಸಿದ್ದಾರೆ.